Advertisement
MIRROR FOCUS

ತರಹೇವಾರಿ ಗೆಡ್ಡೆ-ಗೆಣಸುಗಳದ್ದೇ ಲೋಕ | ಜೋಯಿಡಾದಲ್ಲಿ ನಡೆಯಿತು ಅಪರೂಪದ ವಿವಿಧ ಜಾತಿಯ ಗೆಡ್ಡೆ-ಗೆಣಸುಗಳ ಪ್ರದರ್ಶನ

Share

ಉತ್ತರ ಕನ್ನಡ ಜಿಲ್ಲೆಯ(Uttara Kannada) ಮಂದಿ ಇನ್ನು ತಮ್ಮ ಮೂಲ ಆಹಾರ ಪದ್ಧತಿ, ಕಾಡು ಮೇಡು, ಮೂಲ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಅಲ್ಲಿನ ಜನ ಇಂದಿಗೂ ತರಕಾರಿ(vegetable), ಸೊಪ್ಪು(Green vegetable), ಗೆಡ್ಡೆ ಗೆಣಸುಗಳನ್ನು(tubers-Potato) ಸಾಂಪ್ರದಾಯಿಕ ರೀತಿಯಲ್ಲಿ ಬೆಳೆಯುತ್ತಿದ್ದಾರೆ. ಕಂದಮೂಲ ಆಹಾರಗಳು ಮನುಷ್ಯನ ಮೊದಲ ಆಹಾರವಾಗಿದ್ದವು. ಗೆಡ್ಗೆ-ಗೆಣಸುಗಳು  ಬಹುಷಃ ಮನುಷ್ಯನ ಊಟೋಪಚಾರಕ್ಕೆ ಉಪಯೋಗವಷ್ಟು ಮತ್ಯಾವ ವಸ್ತುಗಳೂ ಬಳಸಲ್ಪಟ್ಟಿಲ್ಲ. ಉತ್ತರ ಕನ್ನಡ  ಜಿಲ್ಲೆಯ ಅಂಕೋಲಾ ಹಾಗೂ ಜೋಯಿಡಾ ಇವೆರೆಡೂ ಯಥೇಚ್ಛವಾಗಿ ಗೆಡ್ಡೆ ಗೆಣಸು ಬೆಳೆಯುವ ಸ್ಥಳ . ಜೋಯಿಡಾದ ಗುಡ್ಡಗಾಡಲ್ಲಿ ಹತ್ತಾರು ವಿಧದ ಗೆಡ್ಡೆ ಗೆಣಸುಗಳು ಈ ಕಾಲದಲ್ಲಿ ಸಿಗುತ್ತವೆ. ಅವುಗಳ ಪ್ರದರ್ಶನವನ್ನು(Exhibition) ಪ್ರತಿ ವರ್ಷ ಕಾಳಿ ಪ್ರವಾಸೋದ್ಯಮ ಇಲಾಖೆ ನಡೆಸುತ್ತದೆ.

ಗೆಡ್ಡೆ ಗೆಣಸುಗಳು ಪ್ರದರ್ಶನ : ಇಲ್ಲಿರುವ ಗೆಡ್ಡೆ ಗೆಣಸುಗಳು 1 ಕೆಜಿಯಿಂದ-50 ಕೆಜಿಯರೆಗೆ ತೂಕ ಹೊಂದಿರುತ್ತವೆ. ಪಂಜರುಗಡ್ಡೆ, ಕೆಸುವಿನ ಗೆಡ್ಡೆ, ತುಪ್ಪಗೆಣಸು, ಮರಗೆಣಸು, ಸಿಹಿಗೆಣಸು, ಕೆಸುವಿನ ಗೆಡ್ಡೆ, ರಚ್ಚೇವು ಗೆಡ್ಡೆ, ಕಂಬಕೆಸು, ಚಿಪ್ಪಗೆಸು, ನೇಗಲಗೊನ್ನೆ, ಪಂಜರಗೆಡ್ಡೆ, ಹಾಲುಗೆಸು, ಚೆಂಗೆಣಸು, ಚಿರಕಾಂಡೆ ಮುಂತಾದ ಗೆಣಸುಗಳ ಪ್ರದರ್ಶನ ಇಲ್ಲಿ ನಡೆಯಿತು. ಒಂದೊಂದು ಗೆಣಸಿಗೆ 500-1000ದಷ್ಟು ದರ ಇದ್ದರೂ ಜನ ಕೊಂಡೊಯ್ದರು. ಸುಮಾರು 125 ಸ್ಟಾಲ್ ಗಳು ಇದ್ದವು.

ಗದೆಯನ್ನು ಮೀರಿಸುವ ಸೈಜಿನ ಗೆಣಸು : ಬರೀ ಜೊಯಿಡಾ ಮಾತ್ರವಲ್ಲದೇ ಬೇರೆ ಬೇರೆ ಭಾಗದಿಂದಲೂ ಕೂಡ ಗೆಡ್ಡೆ-ಗೆಣಸು ಬೆಳೆಯುವ ಜನರು ಇಲ್ಲಿ ಪ್ರದರ್ಶನಕ್ಕೆ ಆಗಮಿಸಿದ್ದರು. ಒಂದೊಂದು ಗೆಡ್ಡೆಯಂತು ಒಂದು ಟಿಪಾಯಿಯ ಸೈಜ್, ಒಂದು ಒನಕೆಯ ಸೈಜ್, ಗದೆಯನ್ನು ಮೀರಿಸುವ ಸೈಜಿನ ಗೆಡ್ಡೆ ಗೆಣಸುಗಳು ಕಂಡುಬಂದವು. ಕೋನ್ ಗಳೆಂದು ಕರೆಯಲ್ಪಡುವ ಗೆಡ್ಡೆಗಳದ್ದೇ ಸಿಂಹಪಾಲಾಗಿತ್ತು.

– ಅಂತರ್ಜಾಲ ಮಾಹಿತಿ

Both Ankola and Zoida in Uttara Kannada district are the places where sweet potato is grown in abundance. Tens of varieties of tubers can be found in the hills of Joida during this season. Their exhibition is conducted by Kali Tourism Department every year.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

21 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

23 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago