ಸುದ್ದಿಗಳು

ವಿಧಾನಸಭೆ ಚುನಾವಣೆ |ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಎಎಪಿ | ಸುಳ್ಯ, ಮಂಗಳೂರು, ಮೂಡಬಿದ್ರೆ ಅಭ್ಯರ್ಥಿ ಘೋಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ  ಆಮ್ ಆದ್ಮಿ ಪಕ್ಷವು  ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.  

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್‌ ಕಾಮತ್‌, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್‌ ಸ್ಫರ್ಧೆಗೆ ಇಳಿದಿದ್ದಾರೆ.

ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್‌ ಆದ್ಮಿ ಪಕ್ಷದಲ್ಲಿ ಈಗ  ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.

ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.‌ ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.

Advertisement

ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

5 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

12 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

12 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

12 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

12 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

21 hours ago