Advertisement
ಸುದ್ದಿಗಳು

ವಿಧಾನಸಭೆ ಚುನಾವಣೆ |ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಎಎಪಿ | ಸುಳ್ಯ, ಮಂಗಳೂರು, ಮೂಡಬಿದ್ರೆ ಅಭ್ಯರ್ಥಿ ಘೋಷಣೆ |

Share

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ  ಆಮ್ ಆದ್ಮಿ ಪಕ್ಷವು  ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.  

ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್‌ ಕಾಮತ್‌, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್‌ ಸ್ಫರ್ಧೆಗೆ ಇಳಿದಿದ್ದಾರೆ.

ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್‌ ಆದ್ಮಿ ಪಕ್ಷದಲ್ಲಿ ಈಗ  ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.

ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.‌ ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.

ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

3 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago