Advertisement
ಸುದ್ದಿಗಳು

ವಿಧಾನಸಭೆ ಚುನಾವಣೆ |ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಎಎಪಿ | ಸುಳ್ಯ, ಮಂಗಳೂರು, ಮೂಡಬಿದ್ರೆ ಅಭ್ಯರ್ಥಿ ಘೋಷಣೆ |

Share

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ  ಆಮ್ ಆದ್ಮಿ ಪಕ್ಷವು  ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.  

ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್‌ ಕಾಮತ್‌, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್‌ ಸ್ಫರ್ಧೆಗೆ ಇಳಿದಿದ್ದಾರೆ.

ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್‌ ಆದ್ಮಿ ಪಕ್ಷದಲ್ಲಿ ಈಗ  ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.

ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.‌ ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.

ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

7 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

24 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago