ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್ ಕಾಮತ್, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್ ಸ್ಫರ್ಧೆಗೆ ಇಳಿದಿದ್ದಾರೆ.
ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್ ಆದ್ಮಿ ಪಕ್ಷದಲ್ಲಿ ಈಗ ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.
ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.
ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…