ಸುಳ್ಯದಲ್ಲಿ ಸೋಮವಾರ ಆಮ್ ಆದ್ಮಿ ಪಕ್ಷದ ಸಭೆ ಹಾಗೂ ಪಂಜಾಬ್ ಜನತೆಗೆ ಅಭಿನಂದನೆ ಮತ್ತು ಆಮ್ ಆದ್ಮಿ ಪಕ್ಷ ಸೇರ್ಪಡೆಯ ಕಾರ್ಯಕ್ರಮ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಮತ್ತು ರಾಜಕೀಯವಾಗಿ ತಟಸ್ಥರಾಗಿದ್ದವರೂ ಎಎಪಿ ಸೇರ್ಪಡೆಯಾದರು. ಮೂಲಭೂತ ಸೌಕರ್ಯಗಳ ಈಡೇರಿಕೆಯ ಕಡೆಗೆ ಭರವಸೆ ಇರಿಸಿ ನೂರಾರು ಮಂದಿ ಎಎಪಿ ಕಡೆಗೆ ಒಲವು ತೋರಿದ್ದರು.
ಎಎಪಿ ಗೆ ಸೋಮವಾರ ಸುಳ್ಯದಲ್ಲಿ 17 ಮಂದಿ ಪ್ರಮುಖರು ಸೇರ್ಪಡೆಯಾದರೆ, ನೂರಕ್ಕೂ ಹೆಚ್ಚು ಮಂದಿ ಹೆಸರು ಎಎಪಿ ಕಡೆಗೆ ಆಸಕ್ತರಾಗಿ ನೋಂದಾಯಿಸಿದ್ದರು. ಎಎಪಿ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ಅವರು ಮಂಗಳೂರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭ ದ ಕ ಜಿಲ್ಲೆಯಲ್ಲಿನ ನೂತನ ಕಾರ್ಯಕರ್ತರ ಪಟ್ಟಿ ಹಾಗೂ ಪಕ್ಷ ಸೇರ್ಪಡೆಯ ಪಟ್ಟಿಯನ್ನು ಪರಿಶೀಲನೆ ನಡೆಸಿದರು.
ಸುಳ್ಯದಲ್ಲಿ ನಡೆದ ಸಭೆಯಲ್ಲಿ ಪ್ರಮುಖ 17 ಮಂದಿ ಪಕ್ಷ ಸೇರ್ಪಡೆಯಾದರು. ಅವರಲ್ಲಿ ಬಿಜೆಪಿ ಹಾಗೂ ಸಹಕಾರ ಭಾರತಿ ಮುಖಂಡ ಪ್ರಸನ್ನ ಎಣ್ಮೂರು, ಮಾಜಿ ಶಾಸಕರ ಪುತ್ರಿ ಎಂಬಿಎ ಪದವೀಧರೆ ಸುಮನಾ, ಪ್ರಮುಖರಾದ ಕರುಣಾಕರ ಮೊದಲಾದವರು ಇದ್ದರು.
ಆಮ್ ಆದ್ಮಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಸನ್ನ ಎಣ್ಮೂರು, ಭ್ರಷ್ಟಾಚಾರದ ಜೊತೆ ಪಕ್ಷಗಳು ಹಾಗೂ ಆಡಳಿತವು ಕೈಜೋಡಿಸಿರುವುದು ಇಂದು ಇಡೀ ರಾಜ್ಯದಲ್ಲಿದೆ. ಜನಸಾಮಾನ್ಯರ ಮೂಲಭೂತ ಆವಶ್ಯಕತೆಗಳಾದ ವಿದ್ಯಾಭ್ಯಾಸ, ರಸ್ತೆ,ಕುಡಿಯುವ ನೀರು,ಆರೋಗ್ಯ,ವಿದ್ಯುತ್,ಆಡಳಿತ ಯಂತ್ರ, ಬದಲಾದ ಜೀವನ ಶೈಲಿಗೆ ಹೊಂದಿರಬೇಕು. ಜಾತಿ ರಾಜಕಾರಣ,ದ್ವೇಷ ರಾಜಕಾರಣಗಳು ಭಾರತದ ಅಭಿವೃದ್ಧಿಗೆ, ಗ್ರಾಮೀಣ ಜನರಿಗೆ ಇಂದು ಅವಶ್ಯವಿಲ್ಲ. ಹೀಗಾಗಿ ಬದಲಾವಣೆ ಎಂಬ ಸುಧಾರಣೆ ನಮ್ಮಲ್ಲಿಂದಲೇ ಆಗಲಿ ಎನ್ನುವ ಅಭಿಲಾಷೆಯಿಂದ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.
ಈ ಹಿಂದೆ ಅಡ್ಡಮತದಾನದ ವಿಷಯದಲ್ಲಿ ಎಲ್ಲಾ ದಾಖಲೆಗಳು ನನ್ನ ಬಳಿ ಇದ್ದರೂ ಸತ್ಯದ ಮಾತಿಗೆ ಬೆಲೆ ಇರಲಿಲ್ಲ. ಎಲ್ಲರಂತೆ ಮುಕ್ತ ಮಾಡಲಾಯಿತು. ಆಗ ಯಾರೊಬ್ಬರೂ ಸೂಕ್ತ ವ್ಯಕ್ತಿ ಎಂದು ಪರಿಗಣಿಸಿರಲಿಲ್ಲ, ಉಳಿಸಿಕೊಳ್ಳಲು ಪ್ರಯತ್ನಿಸಿದ್ದಿಲ್ಲ.ಮತ ಹಾಕಿರುವುದನ್ನು ದಾಖಲೆ ಸಹಿತ ತೋರಿಸಿದರೂ ,ನಿಷ್ಠೆಯಿಂದ ಇದ್ದರೂ ಕಳೆದ ಮೂರು ವರುಷಗಳಿಂದ ಕಡೆಗಣಿಸಲಾಗಿದೆ. ಅಡ್ಡಮತದಾನ ಕಾನತ್ತೂರಿನಲ್ಲಿ ಇತ್ಯರ್ಥ ಆದ ಮೇಲೆ 5 ತಿಂಗಳು ಸಂದರೂ ಯಾವುದೇ ಬೆಳವಣಿಗೆಯೂ ಇಲ್ಲವಾಗಿತ್ತು. ಈಗ ಬೇಕಾಗಿರುವುದು ಕಂಟ್ರಾಕ್ಟ್ ಜನಪ್ರತಿನಿಧಿಗಳ ಭ್ರಷ್ಟಾಚಾರ, ಅಧಿಕಾರಿಗಳ ಕೆಟ್ಟ ಮರ್ಜಿಗೆ ವಿದಾಯ. ಹೀಗಾಗಿ ಈಗ ಆಮ್ ಆದ್ಮಿ ಪಕ್ಷವು ಇದಕ್ಕೆ ಸೂಕ್ತವಾಗಿದೆ. ಸದ್ಯ ಯಾವುದೇ ಪಕ್ಷದ ಪ್ರಾಥಮಿಕ ಸದಸ್ಯನಲ್ಲವೆಂಬ ನನ್ನ ವೈಯಕ್ತಿಕ ತೀರ್ಮಾನವಿದೆ.ಈ ಕಾರಣದಿಂದ ಗ್ರಾಮ, ಜಿಲ್ಲೆ, ರಾಜ್ಯ, ದೇಶವು ಅಭಿವೃದ್ಧಿಯಾಗಬೇಕು ಎನ್ನುವ ಕಲ್ಪನೆಯಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದೇನೆ. ಭ್ರಷ್ಟಾಚಾರ ಎಲ್ಲೇ ಆದರೂ ವಿರೋಧಿಸುತ್ತೇನೆ ಎಂದು ಪ್ರಸನ್ನ ಭಟ್ ಎಣ್ಮೂರು ಹೇಳಿದರು.
ಆಮ್ ಆದ್ಮಿ ಪಾರ್ಟಿ ಸೇರಿದ ಬಹುಪಾಲು ಮಂದಿಯ ಹೇಳಿದ್ದು ದಕ್ಷಿಣ ಕನ್ನಡ ಜಿಲ್ಲೆ ಅದರಲ್ಲೂ ಸುಳ್ಯ ಕ್ಷೇತ್ರದ ಮೂಲಭೂತ ಸೌಲಭ್ಯಗಳ ಕೊರತೆ ನಿವಾರಣೆ. ಭ್ರಷ್ಟಾಚಾರ ಮುಕ್ತ ಗ್ರಾಮಗಳ ಚಿಂತನೆ. ಆಮ್ ಆದ್ಮಿ ಪಾರ್ಟಿಯು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧರ್ಮಾಧಾರಿತ ಸಂಘರ್ಷಗಳಿಂದ ದೂರವಾಗಿ ಅಭಿವೃದ್ಧಿ ಆಧಾರಿತ ಚರ್ಚೆಗಳು ಆರಂಭವಾಗಬೇಕು ಎನ್ನುವುದು ನಿರೀಕ್ಷೆ ಇರಿಸಿಕೊಂಡಿರುವ ಬಗ್ಗೆ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ,ʼರಾಜ್ಯದಲ್ಲಿ ಎಎಪಿ ಸಂಘಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸಮೀಕ್ಷೆ ನಡೆಸಿ ಅಭಿವೃದ್ಧಿ ಆಧಾರಿತವಾಗಿ ಆಯಾ ಕ್ಷೇತ್ರಗಳಿಗೆ ಅಗತ್ಯವಾದ ಯೋಜನೆ ರಚಿಸಿ ಮುಂದಿನ ವಿಧಾನಸಭಾ ಚುನಾವಣೆಯ ವೇಳೆಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…