Advertisement
ರಾಜ್ಯ

ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಸಭೆ | ಮೂಲಭೂತ ಸೌಕರ್ಯದ ಕಡೆಗೆ ಭರವಸೆ | ನೂರಾರು ಮಂದಿ ಎಎಪಿ ಸೇರ್ಪಡೆ | AAP ಸೇರಿದವರು ಹೇಳಿದ್ದೇನು ?

Share

ಸುಳ್ಯದಲ್ಲಿ ಸೋಮವಾರ ಆಮ್‌ ಆದ್ಮಿ ಪಕ್ಷದ ಸಭೆ ಹಾಗೂ ಪಂಜಾಬ್‌ ಜನತೆಗೆ ಅಭಿನಂದನೆ ಮತ್ತು ಆಮ್‌ ಆದ್ಮಿ ಪಕ್ಷ ಸೇರ್ಪಡೆಯ ಕಾರ್ಯಕ್ರಮ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಮತ್ತು ರಾಜಕೀಯವಾಗಿ ತಟಸ್ಥರಾಗಿದ್ದವರೂ ಎಎಪಿ ಸೇರ್ಪಡೆಯಾದರು. ಮೂಲಭೂತ ಸೌಕರ್ಯಗಳ ಈಡೇರಿಕೆಯ ಕಡೆಗೆ ಭರವಸೆ ಇರಿಸಿ ನೂರಾರು ಮಂದಿ ಎಎಪಿ ಕಡೆಗೆ ಒಲವು ತೋರಿದ್ದರು.

ಎಎಪಿ ಗೆ ಸೋಮವಾರ ಸುಳ್ಯದಲ್ಲಿ 17 ಮಂದಿ ಪ್ರಮುಖರು ಸೇರ್ಪಡೆಯಾದರೆ, ನೂರಕ್ಕೂ ಹೆಚ್ಚು ಮಂದಿ ಹೆಸರು ಎಎಪಿ ಕಡೆಗೆ ಆಸಕ್ತರಾಗಿ ನೋಂದಾಯಿಸಿದ್ದರು. ಎಎಪಿ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ಅವರು ಮಂಗಳೂರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭ ದ ಕ ಜಿಲ್ಲೆಯಲ್ಲಿನ ನೂತನ ಕಾರ್ಯಕರ್ತರ ಪಟ್ಟಿ ಹಾಗೂ ಪಕ್ಷ ಸೇರ್ಪಡೆಯ ಪಟ್ಟಿಯನ್ನು ಪರಿಶೀಲನೆ ನಡೆಸಿದರು.

ಸುಳ್ಯದಲ್ಲಿ ನಡೆದ ಸಭೆಯಲ್ಲಿ ಪ್ರಮುಖ 17 ಮಂದಿ ಪಕ್ಷ ಸೇರ್ಪಡೆಯಾದರು. ಅವರಲ್ಲಿ  ಬಿಜೆಪಿ ಹಾಗೂ ಸಹಕಾರ ಭಾರತಿ ಮುಖಂಡ ಪ್ರಸನ್ನ ಎಣ್ಮೂರು, ಮಾಜಿ ಶಾಸಕರ ಪುತ್ರಿ ಎಂಬಿಎ ಪದವೀಧರೆ ಸುಮನಾ, ಪ್ರಮುಖರಾದ ಕರುಣಾಕರ ಮೊದಲಾದವರು  ಇದ್ದರು.

ಆಮ್‌ ಆದ್ಮಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಸನ್ನ ಎಣ್ಮೂರು, ಭ್ರಷ್ಟಾಚಾರದ ಜೊತೆ ಪಕ್ಷಗಳು ಹಾಗೂ ಆಡಳಿತವು  ಕೈಜೋಡಿಸಿರುವುದು ಇಂದು ಇಡೀ ರಾಜ್ಯದಲ್ಲಿದೆ. ಜನಸಾಮಾನ್ಯರ ಮೂಲಭೂತ ಆವಶ್ಯಕತೆಗಳಾದ ವಿದ್ಯಾಭ್ಯಾಸ, ರಸ್ತೆ,ಕುಡಿಯುವ ನೀರು,ಆರೋಗ್ಯ,ವಿದ್ಯುತ್,ಆಡಳಿತ ಯಂತ್ರ, ಬದಲಾದ ಜೀವನ ಶೈಲಿಗೆ ಹೊಂದಿರಬೇಕು. ಜಾತಿ ರಾಜಕಾರಣ,ದ್ವೇಷ ರಾಜಕಾರಣಗಳು ಭಾರತದ ಅಭಿವೃದ್ಧಿಗೆ, ಗ್ರಾಮೀಣ ಜನರಿಗೆ ಇಂದು ಅವಶ್ಯವಿಲ್ಲ. ಹೀಗಾಗಿ ಬದಲಾವಣೆ ಎಂಬ ಸುಧಾರಣೆ ನಮ್ಮಲ್ಲಿಂದಲೇ ಆಗಲಿ ಎನ್ನುವ ಅಭಿಲಾಷೆಯಿಂದ ಆಮ್‌ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

ಈ ಹಿಂದೆ ಅಡ್ಡಮತದಾನದ ವಿಷಯದಲ್ಲಿ ಎಲ್ಲಾ ದಾಖಲೆಗಳು ನನ್ನ ಬಳಿ ಇದ್ದರೂ ಸತ್ಯದ ಮಾತಿಗೆ ಬೆಲೆ ಇರಲಿಲ್ಲ. ಎಲ್ಲರಂತೆ ಮುಕ್ತ ಮಾಡಲಾಯಿತು. ಆಗ ಯಾರೊಬ್ಬರೂ ಸೂಕ್ತ ವ್ಯಕ್ತಿ ಎಂದು ಪರಿಗಣಿಸಿರಲಿಲ್ಲ, ಉಳಿಸಿಕೊಳ್ಳಲು ಪ್ರಯತ್ನಿಸಿದ್ದಿಲ್ಲ.ಮತ ಹಾಕಿರುವುದನ್ನು ದಾಖಲೆ ಸಹಿತ ತೋರಿಸಿದರೂ ,ನಿಷ್ಠೆಯಿಂದ ಇದ್ದರೂ ಕಳೆದ ಮೂರು ವರುಷಗಳಿಂದ ಕಡೆಗಣಿಸಲಾಗಿದೆ. ಅಡ್ಡಮತದಾನ ಕಾನತ್ತೂರಿನಲ್ಲಿ ಇತ್ಯರ್ಥ ಆದ ಮೇಲೆ  5 ತಿಂಗಳು ಸಂದರೂ ಯಾವುದೇ ಬೆಳವಣಿಗೆಯೂ ಇಲ್ಲವಾಗಿತ್ತು. ಈಗ ಬೇಕಾಗಿರುವುದು ಕಂಟ್ರಾಕ್ಟ್ ಜನಪ್ರತಿನಿಧಿಗಳ ಭ್ರಷ್ಟಾಚಾರ, ಅಧಿಕಾರಿಗಳ ಕೆಟ್ಟ ಮರ್ಜಿಗೆ ವಿದಾಯ. ಹೀಗಾಗಿ ಈಗ ಆಮ್‌ ಆದ್ಮಿ ಪಕ್ಷವು ಇದಕ್ಕೆ ಸೂಕ್ತವಾಗಿದೆ. ಸದ್ಯ ಯಾವುದೇ ಪಕ್ಷದ ಪ್ರಾಥಮಿಕ ಸದಸ್ಯನಲ್ಲವೆಂಬ ನನ್ನ ವೈಯಕ್ತಿಕ ತೀರ್ಮಾನವಿದೆ.ಈ ಕಾರಣದಿಂದ ಗ್ರಾಮ, ಜಿಲ್ಲೆ, ರಾಜ್ಯ, ದೇಶವು ಅಭಿವೃದ್ಧಿಯಾಗಬೇಕು ಎನ್ನುವ ಕಲ್ಪನೆಯಲ್ಲಿ ಆಮ್‌ ಆದ್ಮಿ ಪಕ್ಷ ಸೇರಿದ್ದೇನೆ. ಭ್ರಷ್ಟಾಚಾರ ಎಲ್ಲೇ ಆದರೂ ವಿರೋಧಿಸುತ್ತೇನೆ ಎಂದು ಪ್ರಸನ್ನ ಭಟ್‌ ಎಣ್ಮೂರು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಸೇರಿದ ಬಹುಪಾಲು ಮಂದಿಯ ಹೇಳಿದ್ದು ದಕ್ಷಿಣ ಕನ್ನಡ ಜಿಲ್ಲೆ ಅದರಲ್ಲೂ ಸುಳ್ಯ ಕ್ಷೇತ್ರದ ಮೂಲಭೂತ ಸೌಲಭ್ಯಗಳ ಕೊರತೆ ನಿವಾರಣೆ. ಭ್ರಷ್ಟಾಚಾರ ಮುಕ್ತ ಗ್ರಾಮಗಳ ಚಿಂತನೆ. ಆಮ್‌ ಆದ್ಮಿ ಪಾರ್ಟಿಯು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧರ್ಮಾಧಾರಿತ ಸಂಘರ್ಷಗಳಿಂದ ದೂರವಾಗಿ ಅಭಿವೃದ್ಧಿ ಆಧಾರಿತ ಚರ್ಚೆಗಳು ಆರಂಭವಾಗಬೇಕು ಎನ್ನುವುದು  ನಿರೀಕ್ಷೆ ಇರಿಸಿಕೊಂಡಿರುವ ಬಗ್ಗೆ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ,ʼರಾಜ್ಯದಲ್ಲಿ ಎಎಪಿ ಸಂಘಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸಮೀಕ್ಷೆ ನಡೆಸಿ ಅಭಿವೃದ್ಧಿ ಆಧಾರಿತವಾಗಿ ಆಯಾ ಕ್ಷೇತ್ರಗಳಿಗೆ ಅಗತ್ಯವಾದ ಯೋಜನೆ ರಚಿಸಿ ಮುಂದಿನ ವಿಧಾನಸಭಾ ಚುನಾವಣೆಯ ವೇಳೆಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು  ಎಂದರು. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

7 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

14 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago