ರೈತ ಹೋರಾಟದ ಭಾರತ ಬಂದ್ ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ

September 26, 2021
8:05 PM

ರೈತ ಹೋರಾಟದ ಭಾರತ ಬಂದ್ ಗೆ ಉಡುಪಿ ಹಾಗೂ ದ ಕ ಜಿಲ್ಲೆ ಸಂಪೂರ್ಣವಾಗಿ  ಆಮ್ ಆದ್ಮಿ ಪಾರ್ಟಿ ಉಡುಪಿ ಜಿಲ್ಲೆ ಬೆಂಬಲಿಸಲಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

Advertisement

ಭಾನುವಾರ ಉಡುಪಿ ಆಮ್ ಆದ್ಮಿ ಪಾರ್ಟಿ ಸಭೆ ನಡೆಯಿತು. ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಮಂಡಳಿ ಸದಸ್ಯರು ಹಾಗೂ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ವೀಕ್ಷಕರಾದ ಅಶೋಕ ಎಡಮಲೆ ಸಮ್ಮುಖದಲ್ಲಿ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ನಡೆದು, ಪಕ್ಷದ ಚಟುವಟಿಕೆಗಳು ಹಾಗೂ ಸಂಘಟನೆ ಬೆಳವಣಿಗೆ ಬಗ್ಗೆ ಚರ್ಚಿಸಿ ಮುಂದಿನ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆಯ ಆಕಾಂಕ್ಷಿಗಳನ್ನು ಗುರುತಿಸುವುದು, ಕಾಪು ವಿಧಾನಸಭಾ ಕ್ಷೇತ್ರದ ಎಎಪಿ ಪಕ್ಷದ ಸಭೆಯನ್ನು ಮುಂದಿನ ಅಕ್ಟೋಬರ್ 10 ರಂದು ನಡೆಸುವುದು ಮತ್ತು ಹೆಬ್ರಿ ಅಟೋ ಸ್ಟ್ಯಾಂಡ್ ಸಮಸ್ಯೆ ಬಗ್ಗೆ ಎಎಪಿ ನಿಯೋಗ ತೆರಳಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮೂಲಕ ಪರಿಹಾರಕ್ಕೆ ಆಗ್ರಹ ಮಾಡಲು ನಿರ್ಣಯಿಸಿತು.

ಇದೇ ವೇಳೆ ರೈತ ಹೋರಾಟದ ಭಾರತ ಬಂದ್ ಗೆ ಉಡುಪಿ ಹಾಗೂ ದ ಕ ಜಿಲ್ಲೆ ಸಂಪೂರ್ಣವಾಗಿ  ಆಮ್ ಆದ್ಮಿ ಪಾರ್ಟಿ ಉಡುಪಿ ಜಿಲ್ಲೆ ಬೆಂಬಲಿಸಲಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್‌ ಎಡಮಲೆ ತಿಳಿಸಿದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಸುರೇಶ್ ಭಂಡಾರಿ, ಸ್ಟೀಫನ್ ರಿಚರ್ಡ್, ರಮೇಶ್ ಕೋಟ್ಯಾನ್, ವಿಜಯಾನಂದ್ ಪಂಗಳ, ಹರೀಶ್ ಟಿ ಸುವರ್ಣ, ಮೋಹನ್ ಸಾಲೆಕರ್, ಹಿಲ್ಡಾ ಡಿಸೋಜ, ಮಂಜುನಾಥ್ ಭಟ್, ಒಲಿವರ್ ಡಿಸೋಜ, ಆಕರ್ಷ್, ಸವಿತ ಹಾಗೂ ಆಶ್ಲಿ ಕೊರೆನೆಲಿಯೋ ಭಾಗವಹಿಸಿದ್ದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎರಡು ಹಂತಗಳಲ್ಲಿ ಹಾಲಿನ ದರ ಏರಿಕೆ | ಒಟ್ಟು ರೂ.7 ಹೆಚ್ಚಳ | ನೇರ ನಗದು ಮೂಲಕ ರೈತರಿಗೆ ಪಾವತಿ
August 18, 2025
10:19 PM
by: The Rural Mirror ಸುದ್ದಿಜಾಲ
ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
August 18, 2025
9:25 PM
by: The Rural Mirror ಸುದ್ದಿಜಾಲ
ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ
August 18, 2025
9:00 PM
by: The Rural Mirror ಸುದ್ದಿಜಾಲ
ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ
August 18, 2025
8:37 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group