ಸುಳ್ಯ ಕಸ ಸಮಸ್ಯೆ | ಸಮಸ್ಯೆ ಪರಿಹಾರದ ಬದಲು ಉದ್ದಟತನದ ಉತ್ತರ | ನಗರ ಪಂಚಾಯತ್‌ ಅಧ್ಯಕ್ಷರ ಉತ್ತರಕ್ಕೆ ಆಮ್‌ ಆದ್ಮಿ ಪಕ್ಷ ಖಂಡನೆ |

May 11, 2022
7:52 PM

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ವರ್ಷಗಳಿಂದ ತುಂಬಿರುವ ಕಸವನ್ನು ವಿಲೇವಾರಿ ಮಾಡಬೇಕೆಂದು ನಟ ಅನಿರುದ್ದ್ ಮಾಡಿರುವ ವಿಡಿಯೋ ಮನವಿಗೆ ವಾಟ್ಸಾಪ್ ಕಾಮೆಂಟ್ ಮೂಲಕ “ಅನಿರುದ್ದ್ 10 ಲಾರಿ ಕಳುಹಿಸಿ ಕೊಡಲಿ” ಎಂದು ಸವಾಲು ಹಾಕುವ ಮೂಲಕ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು ತನ್ನ ವೈಫಲ್ಯನ್ನು ಒಪ್ಪಿಕೊಂಡಿದೆ. ತಮಗೆ ನಗರದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಅದಕ್ಕಾಗಿ ಖಾಸಗಿ ವ್ಯಕ್ತಿಗಳ ಸಹಾಯ ಕೋರಿ ತಮ್ಮ ಅಸಹಾಯಕತೆಯನ್ನು ತೋರಿಸಿದೆ ಎಂದು ಸುಳ್ಯ ಕ್ಷೇತ್ರ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

Advertisement

ಈ ಬಗ್ಗೆ ಹೇಳಿಕೆ ನೀಡಿರುವ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ, ದಕ್ಷಿಣ ಕನ್ನಡ & ಉಡುಪಿ ವೀಕ್ಷಕ,  ಅಶೋಕ್ ಎಡಮಲೆಯವರು ‘ನಟ ಅನಿರುದ್ದ್ ರವರು ಸಾಮಾಜಿಕ ಕಾಳಜಿಯ ವಿಡಿಯೋ ಹಂಚಿಕೊಂಡಿದ್ದರು. ಕಸದ ಸಮಸ್ಯೆಯನ್ನು ಪರಿಹರಿಸುವ ಬದಲು ಸಮಸ್ಯೆಯ ಗಮನ ಸೆಳೆದ ನಟನ ವಿರುದ್ಧ ಹೇಳಿಕೆ ನೀಡಿರುವ ಪಂಚಾಯತ್ ಅಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ. ನಗರ ಪಂಚಾಯತಿಗೆ 10 ಲಾರಿ ಬೇಕಿದ್ದರೆ ಅದನ್ನು ಒದಗಿಸುವ ಕಾರ್ಯವನ್ನು ಮಾಡಲು ಆಮ್ ಆದ್ಮಿ ಪಕ್ಷ ಸಿದ್ಧವಿದೆ, ಪಂಚಾಯತ್ ಅಧಿಕೃತ ಪತ್ರದ ಮೂಲಕ ಲಾರಿಯ ಅಗತ್ಯತೆ ಮತ್ತು ಕಸ ಹಾಕುವ ಸ್ಥಳವನ್ನು ಖಚಿತಪಡಿಸಬೇಕು.’ ಎಂದರು.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group