Advertisement
ಸುದ್ದಿಗಳು

ಸುಳ್ಯ ಕಸ ಸಮಸ್ಯೆ | ಸಮಸ್ಯೆ ಪರಿಹಾರದ ಬದಲು ಉದ್ದಟತನದ ಉತ್ತರ | ನಗರ ಪಂಚಾಯತ್‌ ಅಧ್ಯಕ್ಷರ ಉತ್ತರಕ್ಕೆ ಆಮ್‌ ಆದ್ಮಿ ಪಕ್ಷ ಖಂಡನೆ |

Share

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ವರ್ಷಗಳಿಂದ ತುಂಬಿರುವ ಕಸವನ್ನು ವಿಲೇವಾರಿ ಮಾಡಬೇಕೆಂದು ನಟ ಅನಿರುದ್ದ್ ಮಾಡಿರುವ ವಿಡಿಯೋ ಮನವಿಗೆ ವಾಟ್ಸಾಪ್ ಕಾಮೆಂಟ್ ಮೂಲಕ “ಅನಿರುದ್ದ್ 10 ಲಾರಿ ಕಳುಹಿಸಿ ಕೊಡಲಿ” ಎಂದು ಸವಾಲು ಹಾಕುವ ಮೂಲಕ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು ತನ್ನ ವೈಫಲ್ಯನ್ನು ಒಪ್ಪಿಕೊಂಡಿದೆ. ತಮಗೆ ನಗರದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಅದಕ್ಕಾಗಿ ಖಾಸಗಿ ವ್ಯಕ್ತಿಗಳ ಸಹಾಯ ಕೋರಿ ತಮ್ಮ ಅಸಹಾಯಕತೆಯನ್ನು ತೋರಿಸಿದೆ ಎಂದು ಸುಳ್ಯ ಕ್ಷೇತ್ರ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ, ದಕ್ಷಿಣ ಕನ್ನಡ & ಉಡುಪಿ ವೀಕ್ಷಕ,  ಅಶೋಕ್ ಎಡಮಲೆಯವರು ‘ನಟ ಅನಿರುದ್ದ್ ರವರು ಸಾಮಾಜಿಕ ಕಾಳಜಿಯ ವಿಡಿಯೋ ಹಂಚಿಕೊಂಡಿದ್ದರು. ಕಸದ ಸಮಸ್ಯೆಯನ್ನು ಪರಿಹರಿಸುವ ಬದಲು ಸಮಸ್ಯೆಯ ಗಮನ ಸೆಳೆದ ನಟನ ವಿರುದ್ಧ ಹೇಳಿಕೆ ನೀಡಿರುವ ಪಂಚಾಯತ್ ಅಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ. ನಗರ ಪಂಚಾಯತಿಗೆ 10 ಲಾರಿ ಬೇಕಿದ್ದರೆ ಅದನ್ನು ಒದಗಿಸುವ ಕಾರ್ಯವನ್ನು ಮಾಡಲು ಆಮ್ ಆದ್ಮಿ ಪಕ್ಷ ಸಿದ್ಧವಿದೆ, ಪಂಚಾಯತ್ ಅಧಿಕೃತ ಪತ್ರದ ಮೂಲಕ ಲಾರಿಯ ಅಗತ್ಯತೆ ಮತ್ತು ಕಸ ಹಾಕುವ ಸ್ಥಳವನ್ನು ಖಚಿತಪಡಿಸಬೇಕು.’ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

37 minutes ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

10 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago