Advertisement
ಜಿಲ್ಲೆ

ಜು.26 | ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಂಗಳೂರಿಗೆ ಭೇಟಿ |

Share

ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.

ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್‌ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್  ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

2 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

3 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

3 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

11 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

12 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

13 hours ago