ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.
ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…