ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.
ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…