ಸುಳ್ಯ | ಬಿಜೆಪಿ ಅಭ್ಯರ್ಥಿ ಘೋಷಣೆ ಬಾಕಿ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ | ಪ್ರಚಾರ ಆರಂಭಿಸಿದ ಎಎಪಿ ಅಭ್ಯರ್ಥಿ ಸುಮನ |

April 3, 2023
12:35 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ  ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ ಇನ್ನೊಂದು ಕಡೆ ಅಭ್ಯರ್ಥಿ ಘೋಷಣೆಗಾಗಿ ಪಕ್ಷಗಳು ಬಿಸಿ ಬಿಸಿ ಚರ್ಚೆಯಲ್ಲಿವೆ. ಈ ನಡುವೆಯೇ ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿ ಘೋಷಣೆ ಮಾಡಿ ಪ್ರಚಾರ ಕಾರ್ಯವನ್ನೂ ಆರಂಭಿಸಿದೆ.

Advertisement
Advertisement

ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಇದೀಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಲನಿಗಳ ಭೇಟಿ ನಡೆಸುತ್ತಿದ್ದಾರೆ. ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಹೇಳಿದ್ದಾರೆ. ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಹಾಗೂ ಎಎಪಿ ಜಿಲ್ಲಾ ಮುಖಂಡ‌ ವೇಣುಗೋಪಾಲ ಪುಚ್ಚಪ್ಪಾಡಿ ಅವರು ಭೇಟಿ ನೀಡಿ ಪಕ್ಷದ ಪರವಾದ ಪ್ರಚಾರ ಕಾರ್ಯಕ್ಕೆ ವೇಗ ನೀಡಿದರು.

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರು ಇದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ
June 10, 2025
2:06 PM
by: ಸಾಯಿಶೇಖರ್ ಕರಿಕಳ
ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |
June 10, 2025
7:38 AM
by: The Rural Mirror ಸುದ್ದಿಜಾಲ
ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
June 10, 2025
7:26 AM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group