Advertisement
ಸುದ್ದಿಗಳು

ಎಎಪಿ ಪ್ರಚಾರ ಅಭಿಯಾನ | ಸುಳ್ಯದಲ್ಲಿ ಸುಮನ ಅವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ | ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ವಿಶ್ವಾಸ |

Share
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ  ಅಶೋಕ್ ಎಡಮಲೆ ಹೇಳಿದರು.
ಅವರು ಗುತ್ತಿಗಾರಿನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.  ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ ಚಿಂತನೆ ಮತ್ತು ಯೋಜನೆಯಿದೆ, ಅದನ್ನು ಸರ್ಕಾರಿ ಆಡಳಿತದ ಮಟ್ಟದಲ್ಲಿ ಸಮರ್ಥವಾಗಿ ಮಂಡಿಸಿ ಅನುಷ್ಠಾನಗೊಳಿಸುವ ಸಾಮರ್ಥ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ  ಸುಮನ ಬೆಳ್ಳಾರ್ಕರ್  ವಿಜಯ ಶತಸಿದ್ಧ, ಆ ಮೂಲಕ ಕ್ಷೇತ್ರದ ಅಭಿವೃದ್ಧಿ ಪರ್ವಕ್ಕೆ ನಾಂದಿಯಾಗಲಿದೆ” ಎಂದು  ಹೇಳಿದರು.
ಪಕ್ಷದ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ಮಾತನಾಡಿ, “ಕ್ಷೇತ್ರದ ಯಾವುದೇ ಅಭಿವೃದ್ಧಿ ಕಾಣದೆ 25 ವರ್ಷಗಳ ಹಿಂದಕ್ಕೆ ಸರಿದಿದೆ. ಮೂಲಭೂತ ನೌಕಾರ್ಯಗಳು ಅಭಿವುದ್ಧಿ ಕಾಣದೆ ಜನ ಸಾಮಾನ್ಯರು ಕಷ್ಟ ಅನುಭವಿಸುತ್ತಾ ಇದ್ದಾರೆ. ಶಿಕ್ಷಣ, ಆರೋಗ್ಯದ ಕಡೆ ಗಮನವೇ ಇಲ್ಲದೆ ಹಲವಾರು ಸರ್ಕಾರಿ ಶಾಲೆ ಕಾಲೇಜು ಕಟ್ಟಡಗಳು ಶಿಥಿಲ ಹೊಂದಿದೆ, ಅಧ್ಯಾಪಕರು ಉಪನ್ಯಾಸಕರ ಕೊರತೆ ಇದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಮತ್ತು ಸರಿಯಾದ ಟೆಸ್ಟ್, ಚಿಕಿತ್ಸೆ ಕೊರತೆಯಿಂದಾಗಿ ಜನಸಾಮಾನ್ಯರು ಸಾವಿರಾರು ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಪಡೆಯು ಸ್ಥಿತಿ ಇದೆ. ಹಲವು ದಶಕಗಳಿಂದ ಮನೆಯ ಭೂ ಆಧಾರ ಇಲ್ಲದೆ ಜನ ಕಂಗೆಟ್ಟಿದ್ದಾರೆ. ಒಟ್ಟಿನಲ್ಲಿ ಸಮಸ್ಯೆಯ ಆಗರವಾಗಿರುವ ಕ್ಷೇತ್ರಕ್ಕೆ ಸಮರ್ಥ ಜನಪ್ರಯಿನಿಧಿಯ ಅಗತ್ಯವಿದೆ. ಅದನ್ನು ಪೂರೈಸಲು ನನ್ನಿಂದ ಸಾಧ್ಯ, ಆದ್ದರಿಂದ ನನಗೆ ಮತ ನೀಡಿ ಗೆಲ್ಲಿಸಬೇಕು” ಎಂದು ವಿನಂತಿಸಿದರು.
ಸಭೆಯಲ್ಲಿ ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾ ಪ್ರಧಾನ ಮುಖಂಡ ವೇಣುಗೋಪಾಲ್ ಪುಚ್ಚಪ್ಪಾಡಿ,  ದೀಪಕ್ ಶೆಣೈ ಪಿ ಹಳೆಗೇಟು,  ಗಣೇಶ್ ಪ್ರಸಾದ್ ಭಟ್ ಕಂದಡ್ಕ, ಮುಖಂಡರಾದ ರಾಮಕೃಷ್ಣ ಬೀರಮಂಗಲ, ಗುರುಪ್ರಸಾದ್ ಮೇರ್ಕಜೆ, ರಶೀದ್ ಜಟ್ಟಿಪ್ಪಳ್ಳ, ಖಲಂದರ್ ಎಲಿಮಲೆ,  ಗಂಗಾಧರ ಗೌಡ, ರವಿಪ್ರಕಾಶ್‌ ರಾವ್‌, ಜೋಸೆಫ್‌ ಪಿರೇರಾ, ಶಾಲಿನ್‌ ಪಿಂಟೋ, ವರ್ಷಿತ್‌ ಕುಲಾಲ್‌  ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

5 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

11 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

15 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

15 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

15 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago