ಸುದ್ದಿಗಳು

ಎಎಪಿ ಪ್ರಚಾರ ಅಭಿಯಾನ | ಸುಳ್ಯದಲ್ಲಿ ಸುಮನ ಅವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ | ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ವಿಶ್ವಾಸ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ  ಅಶೋಕ್ ಎಡಮಲೆ ಹೇಳಿದರು.
ಅವರು ಗುತ್ತಿಗಾರಿನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.  ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ ಚಿಂತನೆ ಮತ್ತು ಯೋಜನೆಯಿದೆ, ಅದನ್ನು ಸರ್ಕಾರಿ ಆಡಳಿತದ ಮಟ್ಟದಲ್ಲಿ ಸಮರ್ಥವಾಗಿ ಮಂಡಿಸಿ ಅನುಷ್ಠಾನಗೊಳಿಸುವ ಸಾಮರ್ಥ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ  ಸುಮನ ಬೆಳ್ಳಾರ್ಕರ್  ವಿಜಯ ಶತಸಿದ್ಧ, ಆ ಮೂಲಕ ಕ್ಷೇತ್ರದ ಅಭಿವೃದ್ಧಿ ಪರ್ವಕ್ಕೆ ನಾಂದಿಯಾಗಲಿದೆ” ಎಂದು  ಹೇಳಿದರು.
ಪಕ್ಷದ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ಮಾತನಾಡಿ, “ಕ್ಷೇತ್ರದ ಯಾವುದೇ ಅಭಿವೃದ್ಧಿ ಕಾಣದೆ 25 ವರ್ಷಗಳ ಹಿಂದಕ್ಕೆ ಸರಿದಿದೆ. ಮೂಲಭೂತ ನೌಕಾರ್ಯಗಳು ಅಭಿವುದ್ಧಿ ಕಾಣದೆ ಜನ ಸಾಮಾನ್ಯರು ಕಷ್ಟ ಅನುಭವಿಸುತ್ತಾ ಇದ್ದಾರೆ. ಶಿಕ್ಷಣ, ಆರೋಗ್ಯದ ಕಡೆ ಗಮನವೇ ಇಲ್ಲದೆ ಹಲವಾರು ಸರ್ಕಾರಿ ಶಾಲೆ ಕಾಲೇಜು ಕಟ್ಟಡಗಳು ಶಿಥಿಲ ಹೊಂದಿದೆ, ಅಧ್ಯಾಪಕರು ಉಪನ್ಯಾಸಕರ ಕೊರತೆ ಇದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಮತ್ತು ಸರಿಯಾದ ಟೆಸ್ಟ್, ಚಿಕಿತ್ಸೆ ಕೊರತೆಯಿಂದಾಗಿ ಜನಸಾಮಾನ್ಯರು ಸಾವಿರಾರು ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಪಡೆಯು ಸ್ಥಿತಿ ಇದೆ. ಹಲವು ದಶಕಗಳಿಂದ ಮನೆಯ ಭೂ ಆಧಾರ ಇಲ್ಲದೆ ಜನ ಕಂಗೆಟ್ಟಿದ್ದಾರೆ. ಒಟ್ಟಿನಲ್ಲಿ ಸಮಸ್ಯೆಯ ಆಗರವಾಗಿರುವ ಕ್ಷೇತ್ರಕ್ಕೆ ಸಮರ್ಥ ಜನಪ್ರಯಿನಿಧಿಯ ಅಗತ್ಯವಿದೆ. ಅದನ್ನು ಪೂರೈಸಲು ನನ್ನಿಂದ ಸಾಧ್ಯ, ಆದ್ದರಿಂದ ನನಗೆ ಮತ ನೀಡಿ ಗೆಲ್ಲಿಸಬೇಕು” ಎಂದು ವಿನಂತಿಸಿದರು.
ಸಭೆಯಲ್ಲಿ ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾ ಪ್ರಧಾನ ಮುಖಂಡ ವೇಣುಗೋಪಾಲ್ ಪುಚ್ಚಪ್ಪಾಡಿ,  ದೀಪಕ್ ಶೆಣೈ ಪಿ ಹಳೆಗೇಟು,  ಗಣೇಶ್ ಪ್ರಸಾದ್ ಭಟ್ ಕಂದಡ್ಕ, ಮುಖಂಡರಾದ ರಾಮಕೃಷ್ಣ ಬೀರಮಂಗಲ, ಗುರುಪ್ರಸಾದ್ ಮೇರ್ಕಜೆ, ರಶೀದ್ ಜಟ್ಟಿಪ್ಪಳ್ಳ, ಖಲಂದರ್ ಎಲಿಮಲೆ,  ಗಂಗಾಧರ ಗೌಡ, ರವಿಪ್ರಕಾಶ್‌ ರಾವ್‌, ಜೋಸೆಫ್‌ ಪಿರೇರಾ, ಶಾಲಿನ್‌ ಪಿಂಟೋ, ವರ್ಷಿತ್‌ ಕುಲಾಲ್‌  ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

5 hours ago

ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…

5 hours ago

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…

6 hours ago

ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…

6 hours ago

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ

ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…

12 hours ago