ಸುಳ್ಯ | ಬಿಜೆಪಿ ಅಭ್ಯರ್ಥಿ ಘೋಷಣೆ ಬಾಕಿ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ | ಪ್ರಚಾರ ಆರಂಭಿಸಿದ ಎಎಪಿ ಅಭ್ಯರ್ಥಿ ಸುಮನ |

April 3, 2023
12:35 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ  ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ ಇನ್ನೊಂದು ಕಡೆ ಅಭ್ಯರ್ಥಿ ಘೋಷಣೆಗಾಗಿ ಪಕ್ಷಗಳು ಬಿಸಿ ಬಿಸಿ ಚರ್ಚೆಯಲ್ಲಿವೆ. ಈ ನಡುವೆಯೇ ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿ ಘೋಷಣೆ ಮಾಡಿ ಪ್ರಚಾರ ಕಾರ್ಯವನ್ನೂ ಆರಂಭಿಸಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಇದೀಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಲನಿಗಳ ಭೇಟಿ ನಡೆಸುತ್ತಿದ್ದಾರೆ. ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಹೇಳಿದ್ದಾರೆ. ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಹಾಗೂ ಎಎಪಿ ಜಿಲ್ಲಾ ಮುಖಂಡ‌ ವೇಣುಗೋಪಾಲ ಪುಚ್ಚಪ್ಪಾಡಿ ಅವರು ಭೇಟಿ ನೀಡಿ ಪಕ್ಷದ ಪರವಾದ ಪ್ರಚಾರ ಕಾರ್ಯಕ್ಕೆ ವೇಗ ನೀಡಿದರು.

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror