Advertisement
ಸುದ್ದಿಗಳು

ಸುಳ್ಯ | ಬಿಜೆಪಿ ಅಭ್ಯರ್ಥಿ ಘೋಷಣೆ ಬಾಕಿ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ | ಪ್ರಚಾರ ಆರಂಭಿಸಿದ ಎಎಪಿ ಅಭ್ಯರ್ಥಿ ಸುಮನ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ  ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ ಇನ್ನೊಂದು ಕಡೆ ಅಭ್ಯರ್ಥಿ ಘೋಷಣೆಗಾಗಿ ಪಕ್ಷಗಳು ಬಿಸಿ ಬಿಸಿ ಚರ್ಚೆಯಲ್ಲಿವೆ. ಈ ನಡುವೆಯೇ ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿ ಘೋಷಣೆ ಮಾಡಿ ಪ್ರಚಾರ ಕಾರ್ಯವನ್ನೂ ಆರಂಭಿಸಿದೆ.

Advertisement
Advertisement
Advertisement
Advertisement

Advertisement

ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಇದೀಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಲನಿಗಳ ಭೇಟಿ ನಡೆಸುತ್ತಿದ್ದಾರೆ. ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಹೇಳಿದ್ದಾರೆ. ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಹಾಗೂ ಎಎಪಿ ಜಿಲ್ಲಾ ಮುಖಂಡ‌ ವೇಣುಗೋಪಾಲ ಪುಚ್ಚಪ್ಪಾಡಿ ಅವರು ಭೇಟಿ ನೀಡಿ ಪಕ್ಷದ ಪರವಾದ ಪ್ರಚಾರ ಕಾರ್ಯಕ್ಕೆ ವೇಗ ನೀಡಿದರು.

Advertisement

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರು ಇದ್ದರು.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

10 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

10 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

19 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

21 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago