ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ ಇನ್ನೊಂದು ಕಡೆ ಅಭ್ಯರ್ಥಿ ಘೋಷಣೆಗಾಗಿ ಪಕ್ಷಗಳು ಬಿಸಿ ಬಿಸಿ ಚರ್ಚೆಯಲ್ಲಿವೆ. ಈ ನಡುವೆಯೇ ಆಮ್ ಆದ್ಮಿ ಪಕ್ಷವು ಅಭ್ಯರ್ಥಿ ಘೋಷಣೆ ಮಾಡಿ ಪ್ರಚಾರ ಕಾರ್ಯವನ್ನೂ ಆರಂಭಿಸಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಇದೀಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಲನಿಗಳ ಭೇಟಿ ನಡೆಸುತ್ತಿದ್ದಾರೆ. ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಹೇಳಿದ್ದಾರೆ. ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಹಾಗೂ ಎಎಪಿ ಜಿಲ್ಲಾ ಮುಖಂಡ ವೇಣುಗೋಪಾಲ ಪುಚ್ಚಪ್ಪಾಡಿ ಅವರು ಭೇಟಿ ನೀಡಿ ಪಕ್ಷದ ಪರವಾದ ಪ್ರಚಾರ ಕಾರ್ಯಕ್ಕೆ ವೇಗ ನೀಡಿದರು.
ಪ್ರಚಾರ ಕಾರ್ಯದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್ ಎಲಿಮಲೆ, ರಶೀದ್ ಜಟ್ಟಿಪಳ್ಳ , ಗುರುಪ್ರಸಾದ್ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರು ಇದ್ದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…