ಪುತ್ತೂರಿನಲ್ಲಿ ಎಎಪಿ ಅಭ್ಯರ್ಥಿ ಡಾ.ವಿಶುಕುಮಾರ್‌ ನಾಮಪತ್ರ ಸಲ್ಲಿಕೆ | ಎ.18 ರಂದು ಸುಳ್ಯದಲ್ಲಿ ಎಎಪಿ ಅಭ್ಯರ್ಥಿ ಸುಮನಾ ನಾಮಪತ್ರ ಸಲ್ಲಿಕೆ |

April 17, 2023
9:49 PM

ಆಮ್‌ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್‌ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಶುಕುಮಾರ್‌ ಅವರು, ಶಿಕ್ಷಣ , ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕಡೆಗೆ  ಗಮನಹರಿಸುತ್ತೇನೆ ಎಂದರು. ‌

ನಾಮಪತ್ರ ಸಲ್ಲಿಕೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ, ಆಮ್‌ ಆದ್ಮಿ ಪಕ್ಷವು ಕೆಲವೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದಿದೆ. ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೇವೆಗಳ ಕಡೆಗೆ ಗಮನಹರಿಸುತ್ತಿದೆ. ಎಲ್ಲರಿಗೂ ಉತ್ತಮ ಸೇವೆ ನೀಡುವುದೇ ಉದ್ದೇಶವಾಗಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ಕಾಳಜಿ ಇರುವ ಸುಶಿಕ್ಷಿತರನ್ನೇ ಪಕ್ಷವು ಆಯ್ಕೆ ಮಾಡುತ್ತದೆ. ಪುತ್ತೂರಿನಲ್ಲಿ ಕೃಷಿ ವಿಜ್ಞಾನಿ ಸ್ಫರ್ಧೆ ಮಾಡಿದರೆ ಸುಳ್ಯದಲ್ಲಿ ಎಂಬಿಎ ಪದವೀಧರೆ  ಸ್ಫರ್ಧೆ ಮಾಡುತ್ತಿದ್ದಾರೆ ಎಂದರು.

ಸುಳ್ಯ ವಿಧಾನಸಭಾ  ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror