ಡಾ.ವಿಷುಕುಮಾರ್
ಆಮ್ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಶುಕುಮಾರ್ ಅವರು, ಶಿಕ್ಷಣ , ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕಡೆಗೆ ಗಮನಹರಿಸುತ್ತೇನೆ ಎಂದರು.
ನಾಮಪತ್ರ ಸಲ್ಲಿಕೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಆಮ್ ಆದ್ಮಿ ಪಕ್ಷವು ಕೆಲವೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದಿದೆ. ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೇವೆಗಳ ಕಡೆಗೆ ಗಮನಹರಿಸುತ್ತಿದೆ. ಎಲ್ಲರಿಗೂ ಉತ್ತಮ ಸೇವೆ ನೀಡುವುದೇ ಉದ್ದೇಶವಾಗಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ಕಾಳಜಿ ಇರುವ ಸುಶಿಕ್ಷಿತರನ್ನೇ ಪಕ್ಷವು ಆಯ್ಕೆ ಮಾಡುತ್ತದೆ. ಪುತ್ತೂರಿನಲ್ಲಿ ಕೃಷಿ ವಿಜ್ಞಾನಿ ಸ್ಫರ್ಧೆ ಮಾಡಿದರೆ ಸುಳ್ಯದಲ್ಲಿ ಎಂಬಿಎ ಪದವೀಧರೆ ಸ್ಫರ್ಧೆ ಮಾಡುತ್ತಿದ್ದಾರೆ ಎಂದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…