Advertisement
ಸುದ್ದಿಗಳು

ಪುತ್ತೂರಿನಲ್ಲಿ ಎಎಪಿ ಅಭ್ಯರ್ಥಿ ಡಾ.ವಿಶುಕುಮಾರ್‌ ನಾಮಪತ್ರ ಸಲ್ಲಿಕೆ | ಎ.18 ರಂದು ಸುಳ್ಯದಲ್ಲಿ ಎಎಪಿ ಅಭ್ಯರ್ಥಿ ಸುಮನಾ ನಾಮಪತ್ರ ಸಲ್ಲಿಕೆ |

Share

ಆಮ್‌ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್‌ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಶುಕುಮಾರ್‌ ಅವರು, ಶಿಕ್ಷಣ , ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕಡೆಗೆ  ಗಮನಹರಿಸುತ್ತೇನೆ ಎಂದರು. ‌

ನಾಮಪತ್ರ ಸಲ್ಲಿಕೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ, ಆಮ್‌ ಆದ್ಮಿ ಪಕ್ಷವು ಕೆಲವೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದಿದೆ. ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೇವೆಗಳ ಕಡೆಗೆ ಗಮನಹರಿಸುತ್ತಿದೆ. ಎಲ್ಲರಿಗೂ ಉತ್ತಮ ಸೇವೆ ನೀಡುವುದೇ ಉದ್ದೇಶವಾಗಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ಕಾಳಜಿ ಇರುವ ಸುಶಿಕ್ಷಿತರನ್ನೇ ಪಕ್ಷವು ಆಯ್ಕೆ ಮಾಡುತ್ತದೆ. ಪುತ್ತೂರಿನಲ್ಲಿ ಕೃಷಿ ವಿಜ್ಞಾನಿ ಸ್ಫರ್ಧೆ ಮಾಡಿದರೆ ಸುಳ್ಯದಲ್ಲಿ ಎಂಬಿಎ ಪದವೀಧರೆ  ಸ್ಫರ್ಧೆ ಮಾಡುತ್ತಿದ್ದಾರೆ ಎಂದರು.

ಸುಳ್ಯ ವಿಧಾನಸಭಾ  ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago