ಡಾ.ವಿಷುಕುಮಾರ್
ಆಮ್ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಶುಕುಮಾರ್ ಅವರು, ಶಿಕ್ಷಣ , ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕಡೆಗೆ ಗಮನಹರಿಸುತ್ತೇನೆ ಎಂದರು.
ನಾಮಪತ್ರ ಸಲ್ಲಿಕೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಆಮ್ ಆದ್ಮಿ ಪಕ್ಷವು ಕೆಲವೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದಿದೆ. ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೇವೆಗಳ ಕಡೆಗೆ ಗಮನಹರಿಸುತ್ತಿದೆ. ಎಲ್ಲರಿಗೂ ಉತ್ತಮ ಸೇವೆ ನೀಡುವುದೇ ಉದ್ದೇಶವಾಗಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ಕಾಳಜಿ ಇರುವ ಸುಶಿಕ್ಷಿತರನ್ನೇ ಪಕ್ಷವು ಆಯ್ಕೆ ಮಾಡುತ್ತದೆ. ಪುತ್ತೂರಿನಲ್ಲಿ ಕೃಷಿ ವಿಜ್ಞಾನಿ ಸ್ಫರ್ಧೆ ಮಾಡಿದರೆ ಸುಳ್ಯದಲ್ಲಿ ಎಂಬಿಎ ಪದವೀಧರೆ ಸ್ಫರ್ಧೆ ಮಾಡುತ್ತಿದ್ದಾರೆ ಎಂದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…