ದಕ್ಷಿಣ ಕನ್ನಡ ಎಎಪಿ | ನಗರ ಹಾಗೂ ಗ್ರಾಮೀಣ ಭಾಗದಿಂದಲೂ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ |

June 1, 2022
11:11 PM

ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ. 

Advertisement

ಆಮ್‌ ಆದ್ಮಿ ಪಾರ್ಟಿಯ  ವಲಯ ಸಂಯೋಜಕರಾದ  ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್‌ ಎಡಮಲೆ  ಹಾಗೂ  ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್‌ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್‌ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ. http://bdc.pe.hu/aap/

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5  ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್‌ http://bdc.pe.hu/aap/

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group