ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಮೊಯಿಸಿನ್ ರಾಣಾ ಸ್ವಾಗತಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…