ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಮೊಯಿಸಿನ್ ರಾಣಾ ಸ್ವಾಗತಿಸಿದರು.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…