ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಮೊಯಿಸಿನ್ ರಾಣಾ ಸ್ವಾಗತಿಸಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…