Advertisement
ಸುದ್ದಿಗಳು

ಚುನಾವಣಾ ತಯಾರಿಯಲ್ಲಿ ಆಮ್ ಆದ್ಮಿ ಪಕ್ಷ | ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಕ್ಕೆ ಸಿದ್ಧತೆ | ಸಂಘಟನಾ ಪ್ರಭಾರಿಯಾಗಿ ದೇವಿಪ್ರಸಾದ್ ಬಜಿಲಕೇರಿ |

Share

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗೆ ತಯಾರಿ ನಡೆಸುತ್ತಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಬೆಂಬಲ ಪಡೆಯಲು ಪಕ್ಷವು ಬಿರುಸಿನ ಪ್ರಚಾರ ನಡೆಸಲು ನಿರ್ಧರಿಸಿದ್ದು, ಪಕ್ಷದ ಹಿರಿಯ ಕಾರ್ಯಕರ್ತ ದೇವಿಪ್ರಸಾದ್ ಬಜೀಲಕೇರಿ ಅವರನ್ನು ಸಂಘಟನಾ ಉಸ್ತುವಾರಿಯಾಗಿ ನೇಮಿಸಿದೆ.

ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ  ನಡೆದ ಸದಸ್ಯರ ಸಭೆಯಲ್ಲಿಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರವು ನಗರದ ಅತ್ಯಂತ ಪ್ರತಿಷ್ಠಿತ ಕ್ಷೇತ್ರವಾಗಿರುವುದರಿಂದ ನಮ್ಮಪಕ್ಷದ ದೃಷ್ಟಿಕೋನವನ್ನು ಸಾಕಾರಗೊಳಿಸಲು ಹೆಚ್ಚಿನ ಜನರನ್ನು ತಲುಪಲು ನಾವು ಹೆಚ್ಚಿನ ಪ್ರಯತ್ನವನ್ನು ಮಾಡಬೇಕು ಎಂದು
ಸಂತೋಷ್ ಕಾಮತ್ ಹೇಳಿದರು.

ನೂತನ ಜವಾಬ್ದಾರಿಯನ್ನು ಸ್ವೀಕರಿಸಿ ಮಾತನಾಡಿದ ದೇವಿಪ್ರಸಾದ್ ಬಜಿಲಕೇರಿ ಮಾತನಾಡಿ, ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಕೋಮುವಾದ ತಾಂಡವವಾಡುತ್ತಿದೆ. ರಾಜಕೀಯ ಕಲುಷಿತಗೊಂಡಿದೆ. ಇದೇ ಎಲ್ಲ ಸಮಸ್ಯೆಗಳಿಗೂ ಮೂಲವಾಗಿದೆ. ರಾಜಕೀಯ ಕೆಟ್ಟದ್ದು ಎಂದು ಭಾವಿಸಿ ಜನ ದೂರ ಉಳಿದುದರಿಂದ ಪರೋಕ್ಷವಾಗಿ ಕೆಟ್ಟ ವ್ಯವಸ್ಥೆಯು ಅಭಿವೃದ್ಧಿ ಹೊಂದುತ್ತಿದೆ. ಕೆಟ್ಟ ವ್ಯವಸ್ಥೆವನ್ನು ತಡೆಯಲು ಸಾಧ್ಯವಿಲ್ಲವೇ? ದೆಹಲಿ ಮತ್ತು ಪಂಜಾಬ್ ಅದನ್ನು ಮಾಡಬಹುದಾದರೆ, ನಾವೇಕೆ ಮಾಡಬಾರದು? ಎಂದು ಹೇಳಿದರು. ಪಕ್ಷದ ಉತ್ತಮ ಆಡಳಿತ, ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಮಾಧ್ಯಮ ಉಸ್ತುವಾರಿ ವೆಂಕಟೇಶ್ ಎನ್. ಬಾಳಿಗಾ ಸ್ವಾಗತಿಸಿದರು. ಎಎಪಿ ದಕ್ಷಿಣ ಕನ್ನಡ ಅಧ್ಯಕ್ಷ ಸಂತೋಷ್ ಕಾಮತ್ ಅವರು ಪಕ್ಷದ ಟೋಪಿ ಮತ್ತು ಶಾಲು ನೀಡಿ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿದರು.

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಮತ್ತು ಮಂಗಳೂರು ದಕ್ಷಿಣ ಸಂಘಟನಾ ಉಸ್ತುವಾರಿ ದೇವಿಪ್ರಸಾದ್ ಬಜಿಲಕೇರಿ ಅವರು ಸದಸ್ಯರೊಂದಿಗೆ ಪಕ್ಷದ ಕಾರ್ಯತಂತ್ರದ ಕುರಿತು ಸಂವಾದಾತ್ಮಕ ಅಧಿವೇಶನ ನಡೆಸಿದರು.

ಕರಾವಳಿ ವಲಯ ಅಧ್ಯಕ್ಷ ಜೆ.ಪಿ.ರಾವ್, ಪಕ್ಷದ ಸದಸ್ಯರಾದ ಶಾನನ್ ಪಿಂಟೋ, ರೋಶನ್ ಪೆರಿಸ್, ನೈಜೆಲ್ ಅಲ್ಬುಕರ್ಕ್ (ಎಂಸಿಸಿ ಸಿವಿಕ್ ಗ್ರೂಪ್ ಸಹ- ಸಂಸ್ಥಾಪಕ), ರವಿಪ್ರಸಾದ್, ಮತ್ತಿತರರು ಉಪಸ್ಥಿತರಿದ್ದರು. ಕೋಶಾಧಿಕಾರಿ ಅವ್ರೆನ್ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಈ ಬಾರಿ ಚುನಾವಣಾ ಕಣಕ್ಕೆ ಇಳಿಯುತ್ತದೆ. ಅಭಿವೃದ್ಧಿ ಪರವಾದ ಹೆಜ್ಜೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಗುರಿಯನ್ನು ಇರಿಸಿಕೊಂಡು ನಗರದಿಂದ ಗ್ರಾಮೀಣ ಭಾಗದವರೆಗೆ ತಲುಪಲಾಗುತ್ತಿದೆ. ಈಗಾಗಲೇ ನೂರಾರು ಮಂದಿ ಆನ್‌ ಲೈನ್‌ ಮೂಲಕ ಪಕ್ಷ ಸೇರ್ಪಡೆಯಾಗಿದ್ದಾರೆ. ಮುಂದೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಪಕ್ಷ ಇನ್ನಷ್ಟು ಬಲಪಡಿಸಲಾಗುತ್ತದೆ.
ಸಂತೋಷ್‌ ಕಾಮತ್‌, ಜಿಲ್ಲಾಧ್ಯಕ್ಷರು, ಎಎಪಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

7 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

7 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

14 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

15 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago