ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಕ್ರಮವನ್ನು ತೆಗೆದುಕೊಳ್ಳುತ್ತಿದೆ.ಇದರ ಉದ್ಘಾಟನಾ ಕಾರ್ಯಕ್ರಮವು ಅ.2 ರಂದು ಮಂಗಳೂರಿನ ಬಿಜೈ ಚರ್ಚ್ ಹಾಲ್ನಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.
ನಾಗರಿಕರು ಈ ಪೋರ್ಟಲ್ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ. ಈ ವಿನೂತನ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎಪಿ ಜಿಲ್ಲಾ ಮಾಧ್ಯಮ ವಕ್ತಾರ ವೆಂಕಟೇಶ ಬಾಳಿಗಾ ತಿಳಿಸಿದ್ದಾರೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




