ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಕ್ರಮವನ್ನು ತೆಗೆದುಕೊಳ್ಳುತ್ತಿದೆ.ಇದರ ಉದ್ಘಾಟನಾ ಕಾರ್ಯಕ್ರಮವು ಅ.2 ರಂದು ಮಂಗಳೂರಿನ ಬಿಜೈ ಚರ್ಚ್ ಹಾಲ್ನಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.
ನಾಗರಿಕರು ಈ ಪೋರ್ಟಲ್ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ. ಈ ವಿನೂತನ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎಪಿ ಜಿಲ್ಲಾ ಮಾಧ್ಯಮ ವಕ್ತಾರ ವೆಂಕಟೇಶ ಬಾಳಿಗಾ ತಿಳಿಸಿದ್ದಾರೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…