ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಕ್ರಮವನ್ನು ತೆಗೆದುಕೊಳ್ಳುತ್ತಿದೆ.ಇದರ ಉದ್ಘಾಟನಾ ಕಾರ್ಯಕ್ರಮವು ಅ.2 ರಂದು ಮಂಗಳೂರಿನ ಬಿಜೈ ಚರ್ಚ್ ಹಾಲ್ನಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.
ನಾಗರಿಕರು ಈ ಪೋರ್ಟಲ್ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ. ಈ ವಿನೂತನ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎಪಿ ಜಿಲ್ಲಾ ಮಾಧ್ಯಮ ವಕ್ತಾರ ವೆಂಕಟೇಶ ಬಾಳಿಗಾ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…