Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಎಎಪಿ ಬಲಗೊಳ್ಳುತ್ತಿರುವುದೇಕೆ ? | ದ ಕ ಜಿಲ್ಲೆಯಲ್ಲಿಯೂ ಚುನಾವಣಾ ಕಣಕ್ಕೆ ಎಎಪಿ | ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅಭ್ಯರ್ಥಿ ಪಕ್ಕಾ..? |

Share

ಕಳೆದ ಕೆಲವು ಸಮಯಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್‌ ಆದ್ಮಿ ಪಕ್ಷ ಸದ್ದು ಮಾಡುತ್ತಿದೆ. ಈಚೆಗೆ ಸಕ್ರಿಯ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆಯೇ ದ ಕ ಜಿಲ್ಲೆಯಲ್ಲಿ ಚುನಾವಣಾ ಕಣಕ್ಕೆ ಇಳಿಯಲು ಆಮ್‌ ಆದ್ಮಿ ಪಕ್ಷ ಸಜ್ಜಾಗುತ್ತಿದೆ. ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. 

ಆಮ್‌ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅಭಿವೃದ್ಧಿಯ ಅಜೆಂಡಾ ಇರಿಸಿಕೊಂಡು ಮುನ್ನೆಲೆಗೆ ಬಂದಿರುವ ಎಎಪಿ ಇದೀಗ ದ ಕ ಜಿಲ್ಲೆಯಲ್ಲೂ ತನ್ನದೇ ಆದ ಅಭಿವೃದ್ಧಿಯ ಅಜೆಂಡಾ ಇರಿಸಿಕೊಂಡಿದೆ. ಈಗಾಗಲೇ ದ ಕ ಜಿಲ್ಲೆಯಲ್ಲಿ  ಕೋಮುದ್ವೇಷದ ಕಾರಣದಿಂದ ಜಿಲ್ಲೆಯ ವ್ಯಾಪಾರ ವಹಿವಾಟುಗಳು, ಆರ್ಥಿಕತೆಯ ಮೇಲೆ ಪರಿಣಾಮ ಬಿದ್ದಿದೆ, ಈ ಹಂತದಲ್ಲಿ ಎಎಪಿ ತನ್ನ ಕಾರ್ಯಕ್ಷೇತ್ರವನ್ನು ದ ಕ ಜಿಲ್ಲೆಯಲ್ಲೂ ವಿಸ್ತರಿಸಿಕೊಳ್ಳುತ್ತಿದೆ. ಈಗಾಗಲೇ ಸದಸ್ಯತ್ವ ಅಭಿಯಾನದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದು ಪಕ್ಷದ ಮೂಲಗಳು ಹೇಳಿದೆ. ಮಂಗಳೂರು, ಪುತ್ತೂರು, ವಿಟ್ಲ , ಸುಳ್ಯದಲ್ಲಿ ಸಾಕಷ್ಟು ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಉತ್ತರ ಕ್ಷೇತ್ರದಲ್ಲೂ ಎಎಪಿ ಕೆಲಸ ಆರಂಭವಾಗಿದೆ ಎನ್ನುತ್ತದೆ ಪಕ್ಷದ ಮೂಲಗಳು.

ಸಂತೋಷ್‌ ಕಾಮತ್, ಎಎಪಿ ದ ಕ ಜಿಲ್ಲಾಧ್ಯಕ್ಷ

ಇದೀಗ ದಕ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಚುನಾವಣೆಗೆ ಸ್ಫರ್ಧೆ ಮಾಡಲು ಎಎಪಿ ಸಿದ್ಧತೆ ನಡೆಸುತ್ತಿದೆ. ಅದರಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಸ್ಫರ್ಧೆಗೆ ಸಜ್ಜಾಗುತ್ತಿದ್ದಾರೆ. ಕಾಲೇಜು ದಿನಗಳಲ್ಲಿಯೇ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸಂತೋಷ್‌ ಕಾಮತ್‌ ಅವರು ಎಬಿವಿಪಿ ಸಹಿತ ವಿವಿಧ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಉದ್ಯಮಿಯೂ ಆಗಿರುವ ಸಂತೋಷ್‌ ಕಾಮತ್‌ ಅವರು ಕಳೆದ ಬಾರಿ ಲಾಕ್ಡೌನ್‌ ಸಮಯದಲ್ಲಿ ವರ್ತಕರ ಪರವಾಗಿ ಧ್ವನಿ ಎತ್ತಿದ್ದರು. ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದು ಅಭಿವೃದ್ಧಿ ಪರವಾಗಿ ತನ್ನದೇ ಆದ ಯೋಜನೆಗಳನ್ನು ಹೊಂದಿದ್ದಾರೆ.

ದ ಕ ಜಿಲ್ಲೆಯಲ್ಲಿ ಕೋಮುದ್ವೇಷಗಳು ಕಡಿಮೆಯಾಗದೇ ಇದ್ದರೆ ಅಭಿವೃದ್ಧಿಯೂ ಹಿನ್ನಡೆಯಾಗಲಿದೆ. ಇಲ್ಲಿ ಎಲ್ಲಾ ಸಮುದಾಯಗಳೂ ಒಂದಾಗಿ ಈ ಸಮಾಜದಲ್ಲಿ ಸಾಗಲೇಬೇಕಾದ ಅನಿವಾರ್ಯತೆ ಇದೆ. ಆದರೆ ಕೋಮು ದ್ವೇಷಗಳ ಕಾರಣದಿಂದ, ಸಮುದಾಯಗಳ ನಡುವಿನ ಗುದ್ದಾಟಗಳ ಕಾರಣಗಳಿಂದ ಅಭಿವೃದ್ಧಿಯ ಮೇಲೂ ಪರೋಕ್ಷ ಹೊಡೆತ ಬೀಳುತ್ತಿದೆ. ಹೀಗಾಗಿ ಆಮ್‌ ಆದ್ಮಿ ಪಕ್ಷ ದ ಕ ಜಿಲ್ಲೆಯಲ್ಲಿ ಈಗ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು  ಹೇಳುತ್ತಾರೆ ಎಎಪಿ ಜಿಲ್ಲಾ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ.  ಯಾವುದೇ ಕೋಮು ದ್ವೇಷಗಳು ನಡೆದಾಗಲೂ ಸರ್ಕಾರವು ಧರ್ಮಾತೀತವಾಗಿ, ಪಕ್ಷಾತೀತವಾಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳುತ್ತಾರೆ. ಈಚೆಗೆ ಎಎಪಿ ಪಕ್ಷವು ಆಂತರಿಕ ಸರ್ವೆ ಮಾಡಿದ ಸಂದರ್ಭವೂ ದ ಕ ಜಿಲ್ಲೆಯಲ್ಲಿನ ಅನೇಕ ವಿದ್ಯಾವಂತ ಜನರು, ಯುವಕರು, ವರ್ತಕರು, ಉದ್ಯಮಿಗಳು ಕೋಮುಗಲಭೆ, ದ್ವೇಷಗಳ ಕಾರಣದಿಂದ ಅಸಮಾಧಾನಗೊಂಡಿರುವುದು  ತಿಳಿದಿದೆ. ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವನ್ನೂ ಅವರೆಲ್ಲಾ ಅಭಿಪ್ರಾಯದಲ್ಲಿ ವ್ಯಕ್ತಪಡಿಸಿದ್ದಾರೆ. ಕೋಮು ದ್ವೇಷಗಳ ಕಾರಣದಿಂದ ಅಭಿವೃದ್ಧಿ ಕುಂಠಿತ, ಭಯ ರಹಿತ ಓಡಾಟವೂ , ಯೋಜನಾ ಬದ್ಧವಾಗಿ ಉದ್ದಿಮೆಗಳ ಕಾರ್ಯವೂ ನಡೆಯದೇ ಇರುವುದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ವೇಣುಗೋಪಾಲ ಪುಚ್ಚಪ್ಪಾಡಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್‌ ಆದ್ಮಿ ಪಕ್ಷ ಬೆಳವಣಿಗೆಯ ಹಂತದಲ್ಲಿದೆ. ಅಭಿವೃದ್ಧಿ ಪರವಾದ ನಿಲುವು ಹೊಂದಿರುವ ಪಕ್ಷದಲ್ಲಿ  ಈಗಾಗಲೇ ವಿವಿಧ ಸ್ಥರದಲ್ಲಿ ಚಿಂತಕರ ತಂಡ ಇದೆ. ದ ಕ ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಗೆ ಸ್ಫರ್ಧಿಸುವ ನಿಲುವನ್ನು  ಹೊಂದಿದೆ.
– – ವೇಣುಗೋಪಾಲ ಪುಚ್ಚಪ್ಪಾಡಿ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

4 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

6 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

12 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

12 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

15 hours ago