Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಎಎಪಿ ಬಲಗೊಳ್ಳುತ್ತಿರುವುದೇಕೆ ? | ದ ಕ ಜಿಲ್ಲೆಯಲ್ಲಿಯೂ ಚುನಾವಣಾ ಕಣಕ್ಕೆ ಎಎಪಿ | ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅಭ್ಯರ್ಥಿ ಪಕ್ಕಾ..? |

Share

ಕಳೆದ ಕೆಲವು ಸಮಯಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್‌ ಆದ್ಮಿ ಪಕ್ಷ ಸದ್ದು ಮಾಡುತ್ತಿದೆ. ಈಚೆಗೆ ಸಕ್ರಿಯ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆಯೇ ದ ಕ ಜಿಲ್ಲೆಯಲ್ಲಿ ಚುನಾವಣಾ ಕಣಕ್ಕೆ ಇಳಿಯಲು ಆಮ್‌ ಆದ್ಮಿ ಪಕ್ಷ ಸಜ್ಜಾಗುತ್ತಿದೆ. ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. 

ಆಮ್‌ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅಭಿವೃದ್ಧಿಯ ಅಜೆಂಡಾ ಇರಿಸಿಕೊಂಡು ಮುನ್ನೆಲೆಗೆ ಬಂದಿರುವ ಎಎಪಿ ಇದೀಗ ದ ಕ ಜಿಲ್ಲೆಯಲ್ಲೂ ತನ್ನದೇ ಆದ ಅಭಿವೃದ್ಧಿಯ ಅಜೆಂಡಾ ಇರಿಸಿಕೊಂಡಿದೆ. ಈಗಾಗಲೇ ದ ಕ ಜಿಲ್ಲೆಯಲ್ಲಿ  ಕೋಮುದ್ವೇಷದ ಕಾರಣದಿಂದ ಜಿಲ್ಲೆಯ ವ್ಯಾಪಾರ ವಹಿವಾಟುಗಳು, ಆರ್ಥಿಕತೆಯ ಮೇಲೆ ಪರಿಣಾಮ ಬಿದ್ದಿದೆ, ಈ ಹಂತದಲ್ಲಿ ಎಎಪಿ ತನ್ನ ಕಾರ್ಯಕ್ಷೇತ್ರವನ್ನು ದ ಕ ಜಿಲ್ಲೆಯಲ್ಲೂ ವಿಸ್ತರಿಸಿಕೊಳ್ಳುತ್ತಿದೆ. ಈಗಾಗಲೇ ಸದಸ್ಯತ್ವ ಅಭಿಯಾನದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದು ಪಕ್ಷದ ಮೂಲಗಳು ಹೇಳಿದೆ. ಮಂಗಳೂರು, ಪುತ್ತೂರು, ವಿಟ್ಲ , ಸುಳ್ಯದಲ್ಲಿ ಸಾಕಷ್ಟು ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಉತ್ತರ ಕ್ಷೇತ್ರದಲ್ಲೂ ಎಎಪಿ ಕೆಲಸ ಆರಂಭವಾಗಿದೆ ಎನ್ನುತ್ತದೆ ಪಕ್ಷದ ಮೂಲಗಳು.

ಸಂತೋಷ್‌ ಕಾಮತ್, ಎಎಪಿ ದ ಕ ಜಿಲ್ಲಾಧ್ಯಕ್ಷ

ಇದೀಗ ದಕ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಚುನಾವಣೆಗೆ ಸ್ಫರ್ಧೆ ಮಾಡಲು ಎಎಪಿ ಸಿದ್ಧತೆ ನಡೆಸುತ್ತಿದೆ. ಅದರಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಸ್ಫರ್ಧೆಗೆ ಸಜ್ಜಾಗುತ್ತಿದ್ದಾರೆ. ಕಾಲೇಜು ದಿನಗಳಲ್ಲಿಯೇ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸಂತೋಷ್‌ ಕಾಮತ್‌ ಅವರು ಎಬಿವಿಪಿ ಸಹಿತ ವಿವಿಧ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಉದ್ಯಮಿಯೂ ಆಗಿರುವ ಸಂತೋಷ್‌ ಕಾಮತ್‌ ಅವರು ಕಳೆದ ಬಾರಿ ಲಾಕ್ಡೌನ್‌ ಸಮಯದಲ್ಲಿ ವರ್ತಕರ ಪರವಾಗಿ ಧ್ವನಿ ಎತ್ತಿದ್ದರು. ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದು ಅಭಿವೃದ್ಧಿ ಪರವಾಗಿ ತನ್ನದೇ ಆದ ಯೋಜನೆಗಳನ್ನು ಹೊಂದಿದ್ದಾರೆ.

ದ ಕ ಜಿಲ್ಲೆಯಲ್ಲಿ ಕೋಮುದ್ವೇಷಗಳು ಕಡಿಮೆಯಾಗದೇ ಇದ್ದರೆ ಅಭಿವೃದ್ಧಿಯೂ ಹಿನ್ನಡೆಯಾಗಲಿದೆ. ಇಲ್ಲಿ ಎಲ್ಲಾ ಸಮುದಾಯಗಳೂ ಒಂದಾಗಿ ಈ ಸಮಾಜದಲ್ಲಿ ಸಾಗಲೇಬೇಕಾದ ಅನಿವಾರ್ಯತೆ ಇದೆ. ಆದರೆ ಕೋಮು ದ್ವೇಷಗಳ ಕಾರಣದಿಂದ, ಸಮುದಾಯಗಳ ನಡುವಿನ ಗುದ್ದಾಟಗಳ ಕಾರಣಗಳಿಂದ ಅಭಿವೃದ್ಧಿಯ ಮೇಲೂ ಪರೋಕ್ಷ ಹೊಡೆತ ಬೀಳುತ್ತಿದೆ. ಹೀಗಾಗಿ ಆಮ್‌ ಆದ್ಮಿ ಪಕ್ಷ ದ ಕ ಜಿಲ್ಲೆಯಲ್ಲಿ ಈಗ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು  ಹೇಳುತ್ತಾರೆ ಎಎಪಿ ಜಿಲ್ಲಾ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ.  ಯಾವುದೇ ಕೋಮು ದ್ವೇಷಗಳು ನಡೆದಾಗಲೂ ಸರ್ಕಾರವು ಧರ್ಮಾತೀತವಾಗಿ, ಪಕ್ಷಾತೀತವಾಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳುತ್ತಾರೆ. ಈಚೆಗೆ ಎಎಪಿ ಪಕ್ಷವು ಆಂತರಿಕ ಸರ್ವೆ ಮಾಡಿದ ಸಂದರ್ಭವೂ ದ ಕ ಜಿಲ್ಲೆಯಲ್ಲಿನ ಅನೇಕ ವಿದ್ಯಾವಂತ ಜನರು, ಯುವಕರು, ವರ್ತಕರು, ಉದ್ಯಮಿಗಳು ಕೋಮುಗಲಭೆ, ದ್ವೇಷಗಳ ಕಾರಣದಿಂದ ಅಸಮಾಧಾನಗೊಂಡಿರುವುದು  ತಿಳಿದಿದೆ. ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವನ್ನೂ ಅವರೆಲ್ಲಾ ಅಭಿಪ್ರಾಯದಲ್ಲಿ ವ್ಯಕ್ತಪಡಿಸಿದ್ದಾರೆ. ಕೋಮು ದ್ವೇಷಗಳ ಕಾರಣದಿಂದ ಅಭಿವೃದ್ಧಿ ಕುಂಠಿತ, ಭಯ ರಹಿತ ಓಡಾಟವೂ , ಯೋಜನಾ ಬದ್ಧವಾಗಿ ಉದ್ದಿಮೆಗಳ ಕಾರ್ಯವೂ ನಡೆಯದೇ ಇರುವುದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ವೇಣುಗೋಪಾಲ ಪುಚ್ಚಪ್ಪಾಡಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್‌ ಆದ್ಮಿ ಪಕ್ಷ ಬೆಳವಣಿಗೆಯ ಹಂತದಲ್ಲಿದೆ. ಅಭಿವೃದ್ಧಿ ಪರವಾದ ನಿಲುವು ಹೊಂದಿರುವ ಪಕ್ಷದಲ್ಲಿ  ಈಗಾಗಲೇ ವಿವಿಧ ಸ್ಥರದಲ್ಲಿ ಚಿಂತಕರ ತಂಡ ಇದೆ. ದ ಕ ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಗೆ ಸ್ಫರ್ಧಿಸುವ ನಿಲುವನ್ನು  ಹೊಂದಿದೆ.
– – ವೇಣುಗೋಪಾಲ ಪುಚ್ಚಪ್ಪಾಡಿ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago