ದ ಕ ಜಿಲ್ಲಾ ಪ್ರವಾಸ ಆರಂಭಿಸಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ | ಎ.29 ರಂದು ಪುತ್ತೂರು-ಕಡಬ-ಸುಳ್ಯ ಭೇಟಿ |

April 28, 2022
10:19 PM

ಆಮ್‌ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29  ರಂದು  ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ  ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ  ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು  ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ  ತಂಡವನ್ನು ಎ.29  ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು  ಎಂದು ಅಶೋಕ್‌ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್‌ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror