ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29 ರಂದು ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ ತಂಡವನ್ನು ಎ.29 ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು ಎಂದು ಅಶೋಕ್ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.