ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಒಂದಾಗಿ ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಇದೆ. ಈಗ ರಾಜ್ಯದಲ್ಲಿ 40% ಕಮಿಶನ್ ಆರೋಪ ಬಂದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಎಪಿ ಆಡಳಿತ ಇರುವ ಪಂಜಾಬ್ ರಾಜ್ಯದಲ್ಲಿ ಅವರದೇ ಸರಕಾರ ಆರೋಗ್ಯ ಸಚಿವರು ಒಂದು ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ, ಸಿಎಂ ಭಗವಂತ್ ಮಾನ್ ಅವರನ್ನು ತಕ್ಷಣವೇ ವಜಾಗೊಳಿಸಿದರು. ಇಂತಹ ಕಠಿಣ ನಿರ್ಧಾರ ಎಲ್ಲಡೆಯೂ ಅಗತ್ಯವಿದೆ ಎಂದು ಎಎಪಿ ಮುಖಂಡ ಕೆ ಮಥಾಯಿ ಅವರು ಹೇಳಿದರು.
ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಆಮ್ ಆದ್ಮಿ ಪಕ್ಷ ಪ್ರಾಮಾಣಿಕ ಪಕ್ಷವಾಗಿ ಬೆಳೆಯುತ್ತಿದೆ. ಭ್ರಷ್ಟಾಚಾರವನ್ನು ಎಎಪಿ ಎಂದೂ ಸಹಿಸುವುದಿಲ್ಲ ಎಂಬುದನ್ನು ಪಂಜಾಬ್ ಮೂಲಕ ಮತ್ತೆ ಸಾಬೀತುಪಡಿಸಿದ್ದಾರೆ. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳಿದ್ದರೂ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಥಾಯಿ ಅವರು ಹೇಳಿದರು. ನಾನು ಸರ್ಕಾರಿ ನೌಕರನಾಗಿದ್ದಾಗಲೂ ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಂಡಿಲ್ಲ. ಭ್ರಷ್ಟಾಚಾರವನ್ನು ತಡೆಯಲು ನಾನು ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಮಾಡಿದ ತೃಪ್ತಿ ಇದೆ. ನನ್ನ ದಿಟ್ಟ ನಿಲುವಿನಿಂದಾಗಿ, ನಾನು 18 ವರ್ಷಗಳಲ್ಲಿ 28 ಬಾರಿ ವರ್ಗಾವಣೆ ಮಾಡಲಾಗಿದೆ. ನಾನು ಅಸಮಾಧಾನಗೊಳ್ಳಲಿಲ್ಲ ಎಂದ ಅವರು ಈಗ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಅವಕಾಶ ಕೊಟ್ಟಿದೆ. ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ಎಲ್ಲ ಕಾಲದಲ್ಲೂ ಮುಂದುವರಿಯಲಿದೆ ಎಂದರು.
ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅತ್ಯಂತ ಅಸಮರ್ಥ ಸಂಸದ. ದ ಕ ಜಿಲ್ಲೆಯ
ಅಭಿವೃದ್ಧಿ ಕುಂಠಿತಗೊಂಡಿದೆ. ಪಂಪ್ವೆಲ್ ಪೂರ್ಣಗೊಳಿಸಲು ಅವರು 10 ವರ್ಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು. ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಗ್ರಾಮೀಣ ಭಾಗಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯನ್ನು ಎದುರಿಸುತ್ತಿದೆ , ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯದ ಕೊರತೆ ಇದೆ ಎಂದ ಮಥಾಯಿ ಕಳೆದ 13 ವರ್ಷಗಳಿಂದ ಇಲ್ಲಿ ನಳಿನ್ ಕುಮಾರ್ ಅವರು ದಕ ಸಂಸದರಾಗಿದ್ದಾರೆ. ಜೊತೆಗೆ ಈಗ ಅದೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿದ್ದಾರೆ. ದ ಕ ಜಿಲ್ಲೆಯ ಅವರ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಒಟ್ಟಾಗಿ ಹೋಗಿ ಪರಿಶೀಲಿಸೋಣ. ಅಲ್ಲಿ ಮೂಲಸೌಕರ್ಯ ಪರಿಶೀಲನೆ ಮಾಡೋಣ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಮಥಾಯಿ ಸವಾಲು ಹಾಕಿದರು.
ಸುದ್ದಿಗೋಷ್ಟಿಯಲ್ಲಿ ಎಎಪಿ ಝೋನ್ ಉಸ್ತುವಾರಿ ಅಶೋಕ್ ಎಡಮಲೆ, ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜೆಪಿ ರಾವ್, ವೇಣುಗೋಪಾಲ ಇದ್ದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…