Advertisement
ಸುದ್ದಿಗಳು

ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ | 40 % ಆರೋಪ ಬಂದರೂ ರಾಜ್ಯ ಸರ್ಕಾರ ಮೌನ | ಎಎಪಿ ಮುಖಂಡ ಕೆ ಮಥಾಯಿ ಹೇಳಿಕೆ |

Share
News Summary
ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಹೋರಾಟದ ಅನಿವಾರ್ಯವಾಗಿದೆ ಎಂದ ಎಎಪಿ |  ದ ಕ ಜಿಲ್ಲೆಯ ಸಂಸದರು ಅಸಮರ್ಥರು | ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮೂಲಸೌಕರ್ಯ ಪರಿಶೀಲನೆ ಮಾಡೋಣ – ಎಎಪಿ ಸವಾಲು |

ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಒಂದಾಗಿ ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಇದೆ. ಈಗ ರಾಜ್ಯದಲ್ಲಿ 40% ಕಮಿಶನ್‌ ಆರೋಪ ಬಂದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಎಪಿ ಆಡಳಿತ ಇರುವ ಪಂಜಾಬ್‌ ರಾಜ್ಯದಲ್ಲಿ ಅವರದೇ ಸರಕಾರ ಆರೋಗ್ಯ ಸಚಿವರು ಒಂದು ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ, ಸಿಎಂ ಭಗವಂತ್ ಮಾನ್ ಅವರನ್ನು ತಕ್ಷಣವೇ ವಜಾಗೊಳಿಸಿದರು. ಇಂತಹ ಕಠಿಣ ನಿರ್ಧಾರ ಎಲ್ಲಡೆಯೂ ಅಗತ್ಯವಿದೆ ಎಂದು ಎಎಪಿ ಮುಖಂಡ ಕೆ ಮಥಾಯಿ ಅವರು ಹೇಳಿದರು.

ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಆಮ್ ಆದ್ಮಿ ಪಕ್ಷ  ಪ್ರಾಮಾಣಿಕ ಪಕ್ಷವಾಗಿ ಬೆಳೆಯುತ್ತಿದೆ. ಭ್ರಷ್ಟಾಚಾರವನ್ನು ಎಎಪಿ ಎಂದೂ ಸಹಿಸುವುದಿಲ್ಲ ಎಂಬುದನ್ನು ಪಂಜಾಬ್‌ ಮೂಲಕ ಮತ್ತೆ ಸಾಬೀತುಪಡಿಸಿದ್ದಾರೆ. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳಿದ್ದರೂ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಥಾಯಿ ಅವರು ಹೇಳಿದರು. ನಾನು ಸರ್ಕಾರಿ ನೌಕರನಾಗಿದ್ದಾಗಲೂ ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಂಡಿಲ್ಲ. ಭ್ರಷ್ಟಾಚಾರವನ್ನು ತಡೆಯಲು ನಾನು ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಮಾಡಿದ ತೃಪ್ತಿ ಇದೆ. ನನ್ನ ದಿಟ್ಟ ನಿಲುವಿನಿಂದಾಗಿ, ನಾನು 18 ವರ್ಷಗಳಲ್ಲಿ 28 ಬಾರಿ ವರ್ಗಾವಣೆ ಮಾಡಲಾಗಿದೆ. ನಾನು ಅಸಮಾಧಾನಗೊಳ್ಳಲಿಲ್ಲ ಎಂದ ಅವರು ಈಗ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಅವಕಾಶ ಕೊಟ್ಟಿದೆ. ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ಎಲ್ಲ ಕಾಲದಲ್ಲೂ ಮುಂದುವರಿಯಲಿದೆ ಎಂದರು.

ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅತ್ಯಂತ ಅಸಮರ್ಥ ಸಂಸದ. ದ ಕ ಜಿಲ್ಲೆಯ
ಅಭಿವೃದ್ಧಿ ಕುಂಠಿತಗೊಂಡಿದೆ. ಪಂಪ್‌ವೆಲ್ ಪೂರ್ಣಗೊಳಿಸಲು ಅವರು 10 ವರ್ಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು. ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಗ್ರಾಮೀಣ ಭಾಗಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯನ್ನು  ಎದುರಿಸುತ್ತಿದೆ , ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯದ ಕೊರತೆ ಇದೆ ಎಂದ ಮಥಾಯಿ ಕಳೆದ 13 ವರ್ಷಗಳಿಂದ ಇಲ್ಲಿ ನಳಿನ್‌ ಕುಮಾರ್‌ ಅವರು ದಕ ಸಂಸದರಾಗಿದ್ದಾರೆ. ಜೊತೆಗೆ ಈಗ ಅದೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿದ್ದಾರೆ. ದ ಕ ಜಿಲ್ಲೆಯ ಅವರ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಒಟ್ಟಾಗಿ ಹೋಗಿ ಪರಿಶೀಲಿಸೋಣ. ಅಲ್ಲಿ ಮೂಲಸೌಕರ್ಯ ಪರಿಶೀಲನೆ ಮಾಡೋಣ  ಎಂದು ಸಂಸದ ನಳಿನ್‌ ಕುಮಾರ್‌  ಕಟೀಲು ಅವರಿಗೆ ಮಥಾಯಿ ಸವಾಲು ಹಾಕಿದರು.

ಸುದ್ದಿಗೋಷ್ಟಿಯಲ್ಲಿ  ಎಎಪಿ ಝೋನ್‌ ಉಸ್ತುವಾರಿ ಅಶೋಕ್‌ ಎಡಮಲೆ, ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌, ಜೆಪಿ ರಾವ್‌, ವೇಣುಗೋಪಾಲ ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago