ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನದ ಝೋನಲ್ ಸಂಘಟನಾ ಉಸ್ತುವಾರಿಯಾಗಿ ಪಕ್ಷದ ಮುಖಂಡ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು ನೇಮಕವಾಗಿದ್ದಾರೆ. ಈಚೆಗೆ ನಡೆದ ಪಕ್ಷದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಝೋನ್ ಉಸ್ತುವಾರಿಯನ್ನು ಕೆ.ಮಥಾಯಿ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಭಾಗಗಳಲ್ಲೂ ಆಮ್ ಆದ್ಮಿ ಪಾರ್ಟಿಯನ್ನು ಬೆಳೆಸುವುದು ಹಾಗೂ ಹಲವು ವರ್ಷಗಳಿಂದ ಇರುವ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ಹಾಗೂ ಸಮಸ್ಯೆ ನಿವಾರಣೆಗೆ ಜನರ ಜೊತೆ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಿದೆ. ಪಕ್ಷ ಸಂಘಟನೆ ಹಾಗೂ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶ ಹೊಂದುವುದು ಮುಖ್ಯ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಹಾಗೂ ಆಮ್ ಆದ್ಮಿ ಪಾರ್ಟಿ ಪರ ಒಲವು ಇರುವ ಮಂದಿಯ ಭೇಟಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಆಸಕ್ತರು ನೋಂದಣಿ ಮಾಡುವ ಬಗ್ಗೆ ಚರ್ಚೆ ನಡೆದು ಆನ್ ಲಿಂಕ್ ಉದ್ಘಾಟಿಸಲಾಯಿತು. ಆನ್ ಲೈನ್ ಲಿಂಕ್ ( ಬಿಡುಗಡೆಯಾದ ಸದಸ್ಯತ್ವ ಲಿಂಕ್ ಇಲ್ಲಿದೆ )
ಈ ಸಂದರ್ಭ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಮುಖರಾದ ದಿವಾಕರ ಸನಿಲ್, ಶಾಂತಲಾ ದಾಮ್ಲೆ, ವಿಜಯ ಶರ್ಮ, ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮೊದಲಾದವರು ಇದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…