ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನದ ಝೋನಲ್ ಸಂಘಟನಾ ಉಸ್ತುವಾರಿಯಾಗಿ ಪಕ್ಷದ ಮುಖಂಡ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು ನೇಮಕವಾಗಿದ್ದಾರೆ. ಈಚೆಗೆ ನಡೆದ ಪಕ್ಷದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಝೋನ್ ಉಸ್ತುವಾರಿಯನ್ನು ಕೆ.ಮಥಾಯಿ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಭಾಗಗಳಲ್ಲೂ ಆಮ್ ಆದ್ಮಿ ಪಾರ್ಟಿಯನ್ನು ಬೆಳೆಸುವುದು ಹಾಗೂ ಹಲವು ವರ್ಷಗಳಿಂದ ಇರುವ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ಹಾಗೂ ಸಮಸ್ಯೆ ನಿವಾರಣೆಗೆ ಜನರ ಜೊತೆ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಿದೆ. ಪಕ್ಷ ಸಂಘಟನೆ ಹಾಗೂ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶ ಹೊಂದುವುದು ಮುಖ್ಯ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಹಾಗೂ ಆಮ್ ಆದ್ಮಿ ಪಾರ್ಟಿ ಪರ ಒಲವು ಇರುವ ಮಂದಿಯ ಭೇಟಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಆಸಕ್ತರು ನೋಂದಣಿ ಮಾಡುವ ಬಗ್ಗೆ ಚರ್ಚೆ ನಡೆದು ಆನ್ ಲಿಂಕ್ ಉದ್ಘಾಟಿಸಲಾಯಿತು. ಆನ್ ಲೈನ್ ಲಿಂಕ್ ( ಬಿಡುಗಡೆಯಾದ ಸದಸ್ಯತ್ವ ಲಿಂಕ್ ಇಲ್ಲಿದೆ )
ಈ ಸಂದರ್ಭ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಮುಖರಾದ ದಿವಾಕರ ಸನಿಲ್, ಶಾಂತಲಾ ದಾಮ್ಲೆ, ವಿಜಯ ಶರ್ಮ, ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮೊದಲಾದವರು ಇದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…