ಸುದ್ದಿಗಳು

ದಕ್ಷಿಣ ಕನ್ನಡ ಎಎಪಿ | ನಗರ ಹಾಗೂ ಗ್ರಾಮೀಣ ಭಾಗದಿಂದಲೂ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ. 

Advertisement
Advertisement

ಆಮ್‌ ಆದ್ಮಿ ಪಾರ್ಟಿಯ  ವಲಯ ಸಂಯೋಜಕರಾದ  ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್‌ ಎಡಮಲೆ  ಹಾಗೂ  ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್‌ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್‌ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ. http://bdc.pe.hu/aap/

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5  ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್‌ http://bdc.pe.hu/aap/

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

2 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

4 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

7 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

11 hours ago