Advertisement
ಸುದ್ದಿಗಳು

ದಕ್ಷಿಣ ಕನ್ನಡ ಎಎಪಿ | ನಗರ ಹಾಗೂ ಗ್ರಾಮೀಣ ಭಾಗದಿಂದಲೂ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ |

Share

ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ. 

ಆಮ್‌ ಆದ್ಮಿ ಪಾರ್ಟಿಯ  ವಲಯ ಸಂಯೋಜಕರಾದ  ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್‌ ಎಡಮಲೆ  ಹಾಗೂ  ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್‌ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್‌ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ. http://bdc.pe.hu/aap/

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5  ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್‌ http://bdc.pe.hu/aap/

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago