ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ.
ಆಮ್ ಆದ್ಮಿ ಪಾರ್ಟಿಯ ವಲಯ ಸಂಯೋಜಕರಾದ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ಹಾಗೂ ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಹೇಳಿದ್ದಾರೆ. http://bdc.pe.hu/aap/
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5 ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್ http://bdc.pe.hu/aap/
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…