Advertisement
ಸುದ್ದಿಗಳು

ದಕ್ಷಿಣ ಕನ್ನಡ ಎಎಪಿ | ನಗರ ಹಾಗೂ ಗ್ರಾಮೀಣ ಭಾಗದಿಂದಲೂ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ |

Share

ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ. 

ಆಮ್‌ ಆದ್ಮಿ ಪಾರ್ಟಿಯ  ವಲಯ ಸಂಯೋಜಕರಾದ  ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್‌ ಎಡಮಲೆ  ಹಾಗೂ  ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್‌ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್‌ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ. http://bdc.pe.hu/aap/

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5  ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್‌ http://bdc.pe.hu/aap/

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

6 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

15 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago