ಮಾಜಿ ಪೊಲೀಸ್ ಕಮಿಷನರ್ , ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿದ್ದ ಭಾಸ್ಕರ್ ರಾವ್ ಅವರು ರಾಜಕೀಯ ಕ್ಷೇತ್ರದ ಕಡೆಗೆ ಆಸಕ್ತರಾಗಿ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್ ಅವರು ಸಿದ್ಧತೆ ನಡೆಸಿದ್ದರು.
ಮಂಗಳವಾರ ಭಾಸ್ಕರ್ ರಾವ್ ಅವರು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದರು. ಮಾ.1 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಭಾಸ್ಕರ್ ರಾವ್ ಅವರು 1990 ರ ಬ್ಯಾಚ್ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…