ಮಾಜಿ ಪೊಲೀಸ್ ಕಮಿಷನರ್ , ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿದ್ದ ಭಾಸ್ಕರ್ ರಾವ್ ಅವರು ರಾಜಕೀಯ ಕ್ಷೇತ್ರದ ಕಡೆಗೆ ಆಸಕ್ತರಾಗಿ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್ ಅವರು ಸಿದ್ಧತೆ ನಡೆಸಿದ್ದರು.
ಮಂಗಳವಾರ ಭಾಸ್ಕರ್ ರಾವ್ ಅವರು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದರು. ಮಾ.1 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಭಾಸ್ಕರ್ ರಾವ್ ಅವರು 1990 ರ ಬ್ಯಾಚ್ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…