ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.
ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…