ಸಂತೋಷ್ ಕಾಮತ್
ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.
ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…