ಸಂತೋಷ್ ಕಾಮತ್
ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.
ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…