ಸಂತೋಷ್ ಕಾಮತ್
ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.
ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…