Advertisement
ಸುದ್ದಿಗಳು

4750 ಕೋಟಿ ಅನುದಾನ ಬಂದರೂ ಮಂಗಳೂರು ನಗರದೊಳಗೆ ಹಲವು ರಸ್ತೆಗಳು ದುರಸ್ತಿಯಾಗಿಲ್ಲ…! | ಇದಾ ಅಭಿವೃದ್ಧಿ….? | ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಪ್ರಶ್ನೆ |

Share

ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ  ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ  ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.‌

ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.

ಮಂಗಳೂರು ನಗರದಲ್ಲಿ ಉರ್ವ, ಅಳಕೆ,ಕಾವೂರು ಸೇರಿದಂತೆ ಬಹುತೇಕ ಎಲ್ಲ ಕಡೆ ನಿರ್ಮಾಣ ಮಾಡಲಾದ ಹೊಸ ಮಾರುಕಟ್ಟೆಗಳು ಬಂದ್ ಆಗಿವೆ. ಸಾರ್ವಜನಿಕರ ಉಪಯೋಗಕ್ಕಾಗುವ ಯಾವ ಕೆಲಸವೂ ಕಾಣುತ್ತಿಲ್ಲ ಎಂದು ಸಂತೋಷ್‌ ಕಾಮತ್‌ ಟೀಕಿಸಿದರು. ಸೆಂಟ್ರಲ್ ಮಾರ್ಕೆಟ್ ತೆರವು ಮಾಡಿ ವ್ಯಾಪಾರಿಗಳು ಬೀದಿಗೆ ಬಂದಿದ್ದಾರೆ. ಇವರಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿರುವಷ್ಟು ಆಸಕ್ತಿ ಇವರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಇಲ್ಲ. ಇವರಿಗೆ ಇಚ್ಛಾಶಕ್ತಿ ಇದ್ದರೆ ಈ ಮಾರ್ಕೆಟುಗಳನ್ನು ಓಪನ್ ಮಾಡಿಸಬಹುದಾಗಿದೆ ಎಂದವರು ಹೇಳಿದ್ದಾರೆ.
ಮಂಗಳೂರು ಹೃದಯ ಭಾಗ ಹಂಪನಕಟ್ಟೆ ಸೇರಿದಂತೆ ಬಹುತೇಕ ನಗರದ ರಸ್ತೆಗಳಲ್ಲಿ, ಫುಟ್ ಪಾಟುಗಳಲ್ಲಿ ಗುಂಡಿ ಬಿದ್ದಿವೆ. ಅದನ್ನು ದುರಸ್ತಿ ಮಾಡುವ ಗೋಜಿಗೆ ಯಾರೂ ಹೋಗುತ್ತಿಲ್ಲ. ಸರ್ಕಾರದ ವಿವಿಧ ಇಲಾಖೆಗಳು, ಖಾಸಗಿ ಕಂಪೆನಿಗಳು ರಸ್ತೆ, ಫುಟ್ ಪಾತ್ ಗಳನ್ನು ಬೇಕಾಬಿಟ್ಟಿ ಅಗೆದು ಹಾಕಿ ಮಂಗಳೂರು ನಗರದ ಸ್ವರೂಪವನ್ನು ಕೆಡಿಸಿ ಹಾಕಿದ್ದಾರೆ. ಸ್ವರೂಪ ಬದಲಾಗಲು ಇನ್ನೇನು ಉಳಿದಿದೆ ಎಂದು ಶಾಸಕರೇ ಹೇಳಬೇಕು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago